4:32 PM Wednesday10 - June 2026
ಬ್ರೇಕಿಂಗ್ ನ್ಯೂಸ್
ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ

ಇತ್ತೀಚಿನ ಸುದ್ದಿ

ಕಿನ್ನಿಗೋಳಿ: ತೋಟಕ್ಕೆ ಕಾಡುಕೋಣ ದಾಳಿ; ಬೆಳೆ ಹಾನಿ, ಸ್ಥಳೀಯರಲ್ಲಿ ಆತಂಕ

15/03/2022, 00:55

ಕಿನ್ನಿಗೋಳಿ(reporterkarnataka.com): ಕಿನ್ನಿಗೋಳಿ ಸಮೀಪದ ಉಳೆಪಾಡಿ ಎಂಬುವಲ್ಲಿ ಸೋಮವಾರ ಬೆಳಿಗ್ಗೆ ಕಾಡುಕೋಣ ಮತ್ತೆ ಪ್ರತ್ಯಕ್ಷವಾಗಿದೆ.

ಕಾಡುಕೋಣವು ಗದ್ದೆ ಮನೆಯ ಮುಂಭಾಗದಲ್ಲಿ ತೋಟಕ್ಕೆ ನುಗ್ಗಿವೆ. ಹಲವಾರು ತೋಟಗಳಿಗೆ ಪ್ರವೇಶಿಸಿ ಬಾಳೆ, ಅಡಿಕೆ ತೆಂಗಿನ ಗಿಡಗಳು  ಹಾನಿ ಮಾಡಿವೆ. ಕಾಡುಕೋಣವನ್ನು ನೋಡಿದ ಸ್ಥಳೀಯರು  ಅದರ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದಾರೆ.


ಕೆಲವೇ ದಿನಗಳ ಹಿಂದೆ ಕುಕ್ಕಟ್ಟೆ ಸಮೀಪದ ರಸ್ತೆ ಬದಿಯಲ್ಲಿ ಕಾಡುಕೋಣವೊಂದು ಪ್ರತ್ಯಕ್ಷವಾಗಿದ್ದು ಈಗ ಮತ್ತೆ ಪ್ರತ್ಯಕ್ಷಗೊಂಡು ಜನರಲ್ಲಿ ಆತಂಕ ಹಾಗೂ ಭಯದ ವಾತಾವರಣ ಸೃಷ್ಟಿಸಿದೆ.

ಇನ್ನೂ ಕೂಡ ಅರಣ್ಯ ಅಧಿಕಾರಿಗಳು  ಕ್ರಮ ಕೈಗೊಳ್ಳದ ಕಾರಣ ಈಗಾದರೂ ಅರಣ್ಯಾಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು ಹಾಗೂ ಸೂಕ್ತ ಕ್ರಮ  ಕೈಗೊಳ್ಳಬೇಕು ಎಂದು  ಸ್ಥಳೀಯರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು