9:23 AM Friday24 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ಕಿನ್ನಿಗೋಳಿ: ತೋಟಕ್ಕೆ ಕಾಡುಕೋಣ ದಾಳಿ; ಬೆಳೆ ಹಾನಿ, ಸ್ಥಳೀಯರಲ್ಲಿ ಆತಂಕ

15/03/2022, 00:55

ಕಿನ್ನಿಗೋಳಿ(reporterkarnataka.com): ಕಿನ್ನಿಗೋಳಿ ಸಮೀಪದ ಉಳೆಪಾಡಿ ಎಂಬುವಲ್ಲಿ ಸೋಮವಾರ ಬೆಳಿಗ್ಗೆ ಕಾಡುಕೋಣ ಮತ್ತೆ ಪ್ರತ್ಯಕ್ಷವಾಗಿದೆ.

ಕಾಡುಕೋಣವು ಗದ್ದೆ ಮನೆಯ ಮುಂಭಾಗದಲ್ಲಿ ತೋಟಕ್ಕೆ ನುಗ್ಗಿವೆ. ಹಲವಾರು ತೋಟಗಳಿಗೆ ಪ್ರವೇಶಿಸಿ ಬಾಳೆ, ಅಡಿಕೆ ತೆಂಗಿನ ಗಿಡಗಳು  ಹಾನಿ ಮಾಡಿವೆ. ಕಾಡುಕೋಣವನ್ನು ನೋಡಿದ ಸ್ಥಳೀಯರು  ಅದರ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದಾರೆ.


ಕೆಲವೇ ದಿನಗಳ ಹಿಂದೆ ಕುಕ್ಕಟ್ಟೆ ಸಮೀಪದ ರಸ್ತೆ ಬದಿಯಲ್ಲಿ ಕಾಡುಕೋಣವೊಂದು ಪ್ರತ್ಯಕ್ಷವಾಗಿದ್ದು ಈಗ ಮತ್ತೆ ಪ್ರತ್ಯಕ್ಷಗೊಂಡು ಜನರಲ್ಲಿ ಆತಂಕ ಹಾಗೂ ಭಯದ ವಾತಾವರಣ ಸೃಷ್ಟಿಸಿದೆ.

ಇನ್ನೂ ಕೂಡ ಅರಣ್ಯ ಅಧಿಕಾರಿಗಳು  ಕ್ರಮ ಕೈಗೊಳ್ಳದ ಕಾರಣ ಈಗಾದರೂ ಅರಣ್ಯಾಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು ಹಾಗೂ ಸೂಕ್ತ ಕ್ರಮ  ಕೈಗೊಳ್ಳಬೇಕು ಎಂದು  ಸ್ಥಳೀಯರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು