7:43 PM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಹಿಜಾಬ್: ಸರಕಾರದ ಆದೇಶ ಎತ್ತಿ ಹಿಡಿದ ರಾಜ್ಯ ಹೈಕೋರ್ಟ್; ರಿಟ್ ಅರ್ಜಿ ವಜಾ

15/03/2022, 11:23

ಬೆಂಗಳೂರು(reporterkarnataka.com): ಶಾಲಾ-ಕಾಲೇಜುಗಳ ತರಗತಿಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಲು ರಾಜ್ಯ ಹೈಕೋರ್ಟ್ ನಿರಾಕರಿಸಿದೆ. ಹಿಜಾಬ್ ಧರಿಸುವುದು ಇಸ್ಲಾಂ ನ ಅಗತ್ಯವಾದ ಧಾರ್ಮಿಕ ಆಚರಣೆಯಲ್ಲ. ಸರಕಾರದ ಆದೇಶ ಕಾನೂನುಬದ್ಧವಾಗಿದೆ ಎಂದು ಹೈಕೋರ್ಟ್ ತ್ರಿಸದಸ್ಯ ಪೀಠ ವ್ಯಾಖ್ಯಾನಿಸಿದೆ. ಹಿಜಾಬ್ ಗೆ ಅವಕಾಶ ನೀಡುವಂತಹ ರಿಟ್ ಅರ್ಜಿಯನ್ನು ವಜಾಗೊಳಿಸಿದೆ.

ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಮತ್ತು ನ್ಯಾಯಮೂರ್ತಿ ಜೆಎಂ ಖಾಜಿ ಅವರನ್ನೊಳಗೊಂಡ ಪೀಠವು ಹಿಜಾಬ್ ಅರ್ಜಿಯ ವಿಚಾರಣೆ ನಡೆಸಿ ಈ ತೀರ್ಪು ಪ್ರಕಟಿಸಿದೆ.

ಹಿರಿಯ ವಕೀಲ ದೇವದತ್ತ್ ಕಾಮತ್ ಅವರು ಕರ್ನಾಟಕ ಹೈಕೋರ್ಟ್ ನ  ಪೂರ್ಣ ಪೀಠದ ಮುಂದೆ ಮುಸ್ಲಿಂ ಹುಡುಗಿಯರ ಪರವಾಗಿ ತಮ್ಮ ವಾದಗಳನ್ನು ಮಂಡಿಸಿದ್ದರು. ಹಿಜಾಬ್ (ಹೆಡ್ ಸ್ಕಾರ್ಫ್) ಧರಿಸಿದ್ದಕ್ಕಾಗಿ ಸರ್ಕಾರಿ ಪಿಯು ಕಾಲೇಜಿನ ಪ್ರವೇಶವನ್ನು ನಿರಾಕರಿಸಿರುವ ಕ್ರಮವನ್ನು ಅವರು ಪ್ರಶ್ನಿಸಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು