4:10 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಪಜೀರು ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎನ್ನೆಸ್ಸೆಸ್ ವಿಶೇಷ ಶಿಬಿರ

15/03/2022, 23:48

ಬಂಟ್ವಾಳ(reporterkarnataka.com):
ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆಯ ಘಟಕ ಕಾಲೇಜ್ ಆದ  ಸಂತ ಅಲೋಶಿಯಸ್  ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ‘ವೈಜ್ಞಾನಿಕ ಮನೋಧರ್ಮಕ್ಕಾಗಿ ಯುವ ಜನತೆ’ ಎಂಬ ಶೀರ್ಷಿಕೆಯಡಿಯಲ್ಲಿ ವಾರ್ಷಿಕ ವಿಶೇಷ ಶಿಬಿರವು ಬಂಟ್ವಾಳ ಪಜೀರು ಗ್ರಾಮದ ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚಿಗೆ ಜರುಗಿತು.

ನಾಯಕತ್ವ ಹಾಗೂ ವ್ಯಕ್ತಿತ್ವ ವಿಕಾಸ ಕಾರ್ಯಗಾರದಲ್ಲಿ ಬಂಟ್ವಾಳ ಕಲ್ಲರಕೋಡಿ ಸರಕಾರಿ ಪ್ರೌಢಶಾಲೆಯ  ಕನ್ನಡ ಭಾಷಾ ಶಿಕ್ಷಕಿ ಜಯಲಕ್ಷ್ಮಿ.ಜಿ ಕುಂಪಲ. ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ ವಿದ್ಯಾರ್ಥಿಗಳು ಚಿಕ್ಕ ವಯಸ್ಸಿನಲ್ಲಿಯೇ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು. ಜೀವನದಲ್ಲಿ ಯೋಜಿತ ಗುರಿ ಇದ್ದರೆ ಯಶಸ್ಸು ಖಂಡಿತ. ಪ್ರತಿಯೊಬ್ಬ  ವ್ಯಕ್ತಿಯು ವಿಶೇಷ. ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಲು ಶುದ್ಧ ಮನಸ್ಸು, ಸದ್ವಿಚಾರ, ತಮ್ಮ ಸ್ವಶಕ್ತಿ ಸಾಮರ್ಥ್ಯವನ್ನು ಅರಿತುಕೊಳ್ಳುವುದು, ಉತ್ತಮ ಶಿಕ್ಷಣವನ್ನೂ ಪಡೆಯುವುದರಿಂದ ವ್ಯಕ್ತಿತ್ವ ವಿಕಸನ ಸಾಧ್ಯ.ಹಾಗೂ ಪುಸ್ತಕ ವನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ ಎಂದು ಹೇಳಿದರು.


ಯೋಜನಾಧಿಕಾರಿಗಳಾದ ಅಲ್ವಿನ್ ಡಿ.ಸೋಜ,ಪ್ರೀಮ ವಿಕ್ಟೋರಿಯಾನ್ ತಾವ್ರ್ರೋ,ಕ್ಯಾರಲ್ ಶರಲ್ ಪಿರೇರಾ,ಡಾ.ನಂದಿನಿ ಶೇಟ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು