8:15 AM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಕ್ರೂಸರ್ ಪಲ್ಟಿ: ವಿಜಯಪುರ ಜಿಲ್ಲೆಯ 5 ಮಂದಿ ಸಾವು; ರಾಮೇಶ್ವರಕ್ಕೆ ಹೋಗುತ್ತಿದ್ದಾಗ ದುರ್ಘಟನೆ

16/03/2022, 13:11

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಣವಿಕಲ್ಲು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಬುಧವಾರ ಮುಂಜಾನೆ ಕ್ರೂಸರ್ ಪಲ್ಟಿಯಾದ
ಪರಿಣಾಮ 5 ಮಂದಿ ಮೃತಪಟ್ಟಿದ್ದು, ಇತರ 9 ಮಂದಿ ಗಾಯಗೊಂಡಿದ್ದಾರೆ.

ಹೊಸಪೇಟೆಯಿಂದ ಚಿತ್ರದುರ್ಗ ಮಾರ್ಗದ ರಾಷ್ಟ್ರೀಯ  ಹೆದ್ದಾರಿ 50ರಲ್ಲಿ ಬುಧವಾರ ಬೆಳಗಿನ ಜಾವ 2 ಗಂಟೆ ವೇಳೆಗೆ ಈ ದುರಂತ ನಡೆದಿದೆ. ಅಪಘಾತದಲ್ಲಿ 3 ಮಂದಿ ಸ್ಥಳದಲ್ಲೇ ಮೃತಪಟ್ಟರೆ, ಇತರ 2 ಮಂದಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವನ್ನಪ್ಪಿದ್ದಾರೆ. ಇತರ 9 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.

ಮೃತಪಟ್ಟವರು ಹಾಗೂ ಗಾಯಾಳುಗಳೆಲ್ಲ ವಿಜಯಪುರ ಜಿಲ್ಲೆ ನಿಡಗುಂದಿ ಗ್ರಾಮದವರಾಗಿದ್ದು, ತಮಿಳುನಾಡಿನ ರಾಮೇಶ್ವರ ಕ್ಷೇತ್ರಕ್ಕೆ ತೆರಳಿದ್ದರೆನ್ನಲಾಗಿದೆ. ವಾಹನ  ಚಾಲಕ ವಾಹನವನ್ನು ಅತಿವೇಗವಾಗಿ ಚಲಾಯಿಸುತ್ತಿದ್ದು, ವಾಹನ ರಸ್ತೆಯ ಮಧ್ಯದ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿಗೆ ಪಲ್ಟಿ ಹೊಡೆದಿದೆ ಎನ್ನಲಾಗಿದೆ.

ಮೃತರನ್ನು ನಿಡಗುಂದಿ ಸಿದ್ದಯ್ಯ ಕಾಳಗಿ(42), ಕಲ್ಲವ್ವ(60),  ಲಕ್ಷ್ಮೀಬಾಯಿ(60), ಕಿರಶಹಾಳ್ ಗ್ರಾಮದ ಕಂತವ್ವ(50), ಆಲಮಟ್ಟಿ ಗ್ರಾಮದ ನೀಲಮ್ಮ(54) ಎಂದು ಗುರುತಿಸಲಾಗಿದೆ.              

ಬಸವನಬಾಗೇವಾಡಿಯ ಬಸಮ್ಮ, ನಿಡಗುಂದಿಯ ನಿರ್ಮಲ, ಭೀಮೇಶಪ್ಪ, ಅನಸೂಯಾ, ಕಿರುಶಾಳ್ ರೇಣುಕಾ, ಸುಮಂಗಳಾ, ಸಿದ್ನಾಳ ಮಹಾನಂದೆಮ್ಮ, ತಿಪ್ಪಮ್ಮ, ಅಬ್ಯಾಳ್ ಶಂಕ್ರಮ್ಮ ತೀವ್ರ ಗಾಯಗೊಂಡವರಾಗಿದ್ದಾರೆ. ಇವರೆಲ್ಲರೂ ವಿಜಯಪುರ ಜಿಲ್ಲೆಯವರಾಗಿದ್ದಾರೆ. ಗಾಯಾಳು ನಿರ್ಮಲಾ ನೀಡಿದ ದೂರಿನಂತೆ ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸ್ಥಳಕ್ಕೆ ಘಟನಾ ಸ್ಥಳಕ್ಕೆ ಕೂಡ್ಲಿಗಿ ಡಿವೈಎಸ್ಪಿ ಜಿ.ಹರೀಶ ರೆಡ್ಡಿ ಭೇಟಿ ನೀಡಿ ಪರಿಶೀಲಿಸಿದ್ದಾರೆ, ಅವರು ಗಾಯಾಳು ದಾಖಲಾಗಿರುವ ಕೂಡ್ಲಿಗಿ ಆಸ್ಪತ್ರೆಗೆ ತೆರಳಿ ಗಾಯಾಳುಗಳನ್ನು ಭೇಟಿಯಾಗಿ ವಿಚಾರಿಸಿದ್ದಾರೆ. ಕೂಡ್ಲಿಗಿ ಸಿಪಿಐ ಕೊಟ್ಟೂರು ಸಿಪಿಐ ಪಿಎಸ್ಐ, ಹೊಸಹಳ್ಳಿ ಪಿಎಸ್ಐ, ಮರಿಯಮ್ಮನಹಳ್ಳಿ ಪಿಎಸ್ಐ ಸೇರಿದಂತೆ ಹಾಗೂ ಹೈವೇ ಪೆಟ್ರೋಲ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಕೊಟ್ಟೂರು ಸಿಪಿಐ ನೇತೃತ್ವದಲ್ಲಿ ಪ್ರಕರಣ ತನಿಖೆ ನಡೆಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು