2:37 AM Sunday17 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

ಕ್ರೂಸರ್ ಪಲ್ಟಿ: ವಿಜಯಪುರ ಜಿಲ್ಲೆಯ 5 ಮಂದಿ ಸಾವು; ರಾಮೇಶ್ವರಕ್ಕೆ ಹೋಗುತ್ತಿದ್ದಾಗ ದುರ್ಘಟನೆ

16/03/2022, 13:11

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಣವಿಕಲ್ಲು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಬುಧವಾರ ಮುಂಜಾನೆ ಕ್ರೂಸರ್ ಪಲ್ಟಿಯಾದ
ಪರಿಣಾಮ 5 ಮಂದಿ ಮೃತಪಟ್ಟಿದ್ದು, ಇತರ 9 ಮಂದಿ ಗಾಯಗೊಂಡಿದ್ದಾರೆ.

ಹೊಸಪೇಟೆಯಿಂದ ಚಿತ್ರದುರ್ಗ ಮಾರ್ಗದ ರಾಷ್ಟ್ರೀಯ  ಹೆದ್ದಾರಿ 50ರಲ್ಲಿ ಬುಧವಾರ ಬೆಳಗಿನ ಜಾವ 2 ಗಂಟೆ ವೇಳೆಗೆ ಈ ದುರಂತ ನಡೆದಿದೆ. ಅಪಘಾತದಲ್ಲಿ 3 ಮಂದಿ ಸ್ಥಳದಲ್ಲೇ ಮೃತಪಟ್ಟರೆ, ಇತರ 2 ಮಂದಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವನ್ನಪ್ಪಿದ್ದಾರೆ. ಇತರ 9 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.

ಮೃತಪಟ್ಟವರು ಹಾಗೂ ಗಾಯಾಳುಗಳೆಲ್ಲ ವಿಜಯಪುರ ಜಿಲ್ಲೆ ನಿಡಗುಂದಿ ಗ್ರಾಮದವರಾಗಿದ್ದು, ತಮಿಳುನಾಡಿನ ರಾಮೇಶ್ವರ ಕ್ಷೇತ್ರಕ್ಕೆ ತೆರಳಿದ್ದರೆನ್ನಲಾಗಿದೆ. ವಾಹನ  ಚಾಲಕ ವಾಹನವನ್ನು ಅತಿವೇಗವಾಗಿ ಚಲಾಯಿಸುತ್ತಿದ್ದು, ವಾಹನ ರಸ್ತೆಯ ಮಧ್ಯದ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿಗೆ ಪಲ್ಟಿ ಹೊಡೆದಿದೆ ಎನ್ನಲಾಗಿದೆ.

ಮೃತರನ್ನು ನಿಡಗುಂದಿ ಸಿದ್ದಯ್ಯ ಕಾಳಗಿ(42), ಕಲ್ಲವ್ವ(60),  ಲಕ್ಷ್ಮೀಬಾಯಿ(60), ಕಿರಶಹಾಳ್ ಗ್ರಾಮದ ಕಂತವ್ವ(50), ಆಲಮಟ್ಟಿ ಗ್ರಾಮದ ನೀಲಮ್ಮ(54) ಎಂದು ಗುರುತಿಸಲಾಗಿದೆ.              

ಬಸವನಬಾಗೇವಾಡಿಯ ಬಸಮ್ಮ, ನಿಡಗುಂದಿಯ ನಿರ್ಮಲ, ಭೀಮೇಶಪ್ಪ, ಅನಸೂಯಾ, ಕಿರುಶಾಳ್ ರೇಣುಕಾ, ಸುಮಂಗಳಾ, ಸಿದ್ನಾಳ ಮಹಾನಂದೆಮ್ಮ, ತಿಪ್ಪಮ್ಮ, ಅಬ್ಯಾಳ್ ಶಂಕ್ರಮ್ಮ ತೀವ್ರ ಗಾಯಗೊಂಡವರಾಗಿದ್ದಾರೆ. ಇವರೆಲ್ಲರೂ ವಿಜಯಪುರ ಜಿಲ್ಲೆಯವರಾಗಿದ್ದಾರೆ. ಗಾಯಾಳು ನಿರ್ಮಲಾ ನೀಡಿದ ದೂರಿನಂತೆ ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸ್ಥಳಕ್ಕೆ ಘಟನಾ ಸ್ಥಳಕ್ಕೆ ಕೂಡ್ಲಿಗಿ ಡಿವೈಎಸ್ಪಿ ಜಿ.ಹರೀಶ ರೆಡ್ಡಿ ಭೇಟಿ ನೀಡಿ ಪರಿಶೀಲಿಸಿದ್ದಾರೆ, ಅವರು ಗಾಯಾಳು ದಾಖಲಾಗಿರುವ ಕೂಡ್ಲಿಗಿ ಆಸ್ಪತ್ರೆಗೆ ತೆರಳಿ ಗಾಯಾಳುಗಳನ್ನು ಭೇಟಿಯಾಗಿ ವಿಚಾರಿಸಿದ್ದಾರೆ. ಕೂಡ್ಲಿಗಿ ಸಿಪಿಐ ಕೊಟ್ಟೂರು ಸಿಪಿಐ ಪಿಎಸ್ಐ, ಹೊಸಹಳ್ಳಿ ಪಿಎಸ್ಐ, ಮರಿಯಮ್ಮನಹಳ್ಳಿ ಪಿಎಸ್ಐ ಸೇರಿದಂತೆ ಹಾಗೂ ಹೈವೇ ಪೆಟ್ರೋಲ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಕೊಟ್ಟೂರು ಸಿಪಿಐ ನೇತೃತ್ವದಲ್ಲಿ ಪ್ರಕರಣ ತನಿಖೆ ನಡೆಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು