3:07 PM Friday3 - April 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಬೆಳಗಾವಿ: ಮುಳ್ಳೂರ ಆಯಿಲ್ ಮಿಲ್ ನಲ್ಲಿ ಭಾರಿ ಅಗ್ನಿ ದುರಂತ; 20 ಲಕ್ಷ ರೂ. ಮೌಲ್ಯದ ಶೇಂಗಾ ಎಣ್ಣೆ ನಾಶ

16/03/2022, 18:30

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com 

ಜಿಲ್ಲೆಯ ರಾಮದುರ್ಗ ಪಟ್ಟಣದ ಗಾಂಧಿನಗರದ ವೆಂಕಟೇಶ್ ಟಾಕೀಸ್ ಹಿಂದುಗಡೆ ಇರುವ ಸಿದ್ದೇಶ್ವರ ಆಯಿಲ್ ಇಂಡಸ್ಟ್ರಿಸ್  ಮುಳ್ಳೂರ ಆಯಿಲ್ ಮಿಲ್ ನಲ್ಲಿ ಬುಧವಾರ  ತಡರಾತ್ರಿ ಅಗ್ನಿ ಅನಾಹುತ ಸಂಭವಿಸಿದ್ದು, ಸುಮಾರು 20 ಲಕ್ಷ ರೂ. ಮೌಲ್ಯದ ಶೇಂಗಾ ಎಣ್ಣೆ ಸುಟ್ಟುಹೋಗಿದೆ.


ತಡರಾತ್ರಿ ಸುಮಾರು 2 ಗಂಟೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಆಯಿಲ್ ಮಿಲಗೆ ಬೆಂಕಿ ಕಾಣಿಸಿಕೊಂಡಿದೆ. ಈ ಆಯಿಲ್ ಮಿಲನಲ್ಲಿ ಶೇಂಗಾ ಎಣ್ಣೆ, ಸೂರ್ಯಪಾನ ಎಸ್ ಎಫ್  ಎಣ್ಣೆ  ತಯಾರಿ ಮಾಡಲಾಗುತ್ತಿತ್ತು. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಆಯಿಲ್ ಮಿಲಗೆ  ಬೆಂಕಿ ಹತ್ತಿ ಉರಿದಿದೆ.

ಸ್ಥಳಕ್ಕೆ ಕೂಡಲೇ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ‌ ನಂದಿಸುವ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿಯನ್ನು ನಂದಿಸಲು 5 ಗಂಟೆಗಳ ಕಾಲ ಬೇಕಾಯಿತು. 

ಸುಮಾರು 18 ರಿಂದ 20 ಲಕ್ಷ ಮೌಲ್ಯದ ಶೇಂಗಾ ಹಾಗೂ ಎಣ್ಣೆ ಸುಟ್ಟು ಭಸ್ಮವಾಗಿದೆ. 

ಬೆಂಕಿ ಕಾಣಿಸಿಕೊಂಡಿದ್ದು ನೋಡಿ ಸಾರ್ವಜನಿಕರು ಮಾಲೀರಿಗೆ  ಕರೆ ಮಾಡಿ ತಿಳಿಸಿದ್ದಾರೆ. 

ಅಗ್ನಿಶಾಮಕ ದಳದ ಅಧಿಕಾರಿಗಳಾದ ಮಂಜುನಾಥ ಕಲಾದಗಿ ಮಾತನಾಡಿ, ರಾತ್ರಿ 3 ಗಂಟೆಗೆ ಆಯಿಲ್ ಮಿಲ್ ನಲ್ಲಿ ಬೆಂಕಿ ಕಾಣಿಸಿ ಕೊಂಡಿರುವ ಸುದ್ದಿ ತಿಳಿತು. ಸುದ್ದಿಯನ್ನು ಕೇಳಿದ ತಕ್ಷಣ ನಾವು ಒಂದು ವಾಹನ ತೆಗೆದುಕೊಂಡು ಸ್ಥಳಕ್ಕೆ ಹೋದೆವು. ಅಲ್ಲಿ ಬೆಂಕಿ ಅತಿ ಹೆಚ್ಚು ಇತ್ತು. ನಂತರ ನಾವು ಇನ್ನೊಂದು ನಮ್ಮ ಅಗ್ನಿ ಜಲವಾಹನ ತಂದು 2 ವಾಹನದಿಂದ ಸತತವಾಗಿ 5 ರಿಂದ 6 ಗಂಟೆ ಕಾರ್ಯಾಚರಣೆ ನಡೆಸಿ 6 ರಿಂದ 8 ಸಲಾ ನೀರನ್ನು ತರಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದೇವೆ ಎಂದು ಹೇಳಿದರು. 


ಶ್ರೀ ಸಿದ್ದೇಶ್ವರ ಆಯಿಲ್ ಇಂಡಸ್ಟ್ರಿಜ್  ಮುಳ್ಳೂರ ಆಯಿಲ್ ಮಿಲ್ ಮಾಲಿಕರಾದ ಸಿದ್ದು ಮಲ್ಲಿಕಾರ್ಜುನ್  ಮುಳ್ಳೂರ ಅವರು ಮಾತನಾಡಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿದ್ದು ಸುಮಾರು 500 ಚಿಲ್  ಶೇಂಗಾ,  200 ಚಿಲ್ ಶೆಂಗಾ ಕಾಳೂ ಮತ್ತು ಎಣ್ಣೆ ಕೂಡಾ ಇತ್ತು ಸುಮಾರು 18 ರಿಂದ 20 ಲಕ್ಷ  ರೂಪಾಯಿ ವರಿಗೂ ಹಾನಿಯಾಗಿದೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು