5:40 AM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಇಡೀ ಮಂಗಳೂರನ್ನೇ ತುದಿಗಾಲಿನಲ್ಲಿ ನಿಲ್ಲಿಸಿದ್ದ ಬಾಂಬ್ ಪ್ರಕರಣ: ಆರೋಪಿ ಆದಿತ್ಯ ರಾವ್ ಗೆ 20 ವರ್ಷ ಜೈಲು

16/03/2022, 22:37

ಮಂಗಳೂರು(reporterkarnataka.com): ಇಡೀ ಮಂಗಳೂರನ್ನೇ ತುದಿಗಾಲಿನಲ್ಲಿ ನಿಲ್ಲಿಸಿದ ಬಾಂಬ್ ಪ್ರಕರಣ ತೀರ್ಪು ಹೊರಬಿದ್ದಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಪ್ರಕರಣದ ಆರೋಪಿ ಆದಿತ್ಯ ರಾವ್ ಗೆ ದ.ಕ. ಜಿಲ್ಲಾ 4ನೇ ಹೆಚ್ಚುವರಿ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿದೆ.

ಆದಿತ್ಯ ರಾವ್ 2020, ಜನವರಿ 20ರಂದು ಆಟೋರಿಕ್ಷಾವೊಂದರಲ್ಲಿ ಬಂದು ವಿಮಾನ ನಿಲ್ದಾಣದ ನಿರ್ಗಮನ ದ್ವಾರದ ಬಳಿ ಸ್ಫೋಟಕ ತುಂಬಿದ್ದ ಬ್ಯಾಗೊಂದನ್ನು ಇಟ್ಟು ಅದೇ ರಿಕ್ಷಾದಲ್ಲಿ ಪರಾರಿಯಾಗಿದ್ದ. ಭದ್ರತಾ ಸಿಬ್ಬಂದಿಗಳು ಅನಾಥವಾಗಿರುವ ಬ್ಯಾಗನ್ನು ಕಂಡು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಅನಾಥ ಬ್ಯಾಗ್ ನ ವಿಷಯ ಹೊರಬರುತ್ತಿದ್ದಂತೆ ಕೆಲವು ಖಾಸಗಿ ವಾಹಿನಿಗಳು ಇಡೀ ದಿನ ಈ ಕುರಿತು ಊಹಾಪೋಹ ವರದಿ ಮಾಡಿದ್ದವು. ನಂತರ ಸಿಸಿ ಕ್ಯಾಮೆರಾ ಫೂಟೇಜ್ ನೋಡಿದ ಬಳಿಕ ಆರೋಪಿಯ ಸುಳಿವು ಪಡೆಯುವಲ್ಲಿ ಪೊಲೀಸರು ಯಶಸ್ವಿಯಾದರು. ಈ ನಡುವೆ ಆರೋಪಿ ಆದಿತ್ಯ ರಾವ್ ಬೆಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕರ ಮುಂದೆ ಶರಣಾಗಿದ್ದ.

ಇತ್ತೀಚಿನ ಸುದ್ದಿ

ಜಾಹೀರಾತು