10:18 PM Monday18 - May 2026
ಬ್ರೇಕಿಂಗ್ ನ್ಯೂಸ್
ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್…

ಇತ್ತೀಚಿನ ಸುದ್ದಿ

ಇಡೀ ಮಂಗಳೂರನ್ನೇ ತುದಿಗಾಲಿನಲ್ಲಿ ನಿಲ್ಲಿಸಿದ್ದ ಬಾಂಬ್ ಪ್ರಕರಣ: ಆರೋಪಿ ಆದಿತ್ಯ ರಾವ್ ಗೆ 20 ವರ್ಷ ಜೈಲು

16/03/2022, 22:37

ಮಂಗಳೂರು(reporterkarnataka.com): ಇಡೀ ಮಂಗಳೂರನ್ನೇ ತುದಿಗಾಲಿನಲ್ಲಿ ನಿಲ್ಲಿಸಿದ ಬಾಂಬ್ ಪ್ರಕರಣ ತೀರ್ಪು ಹೊರಬಿದ್ದಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಪ್ರಕರಣದ ಆರೋಪಿ ಆದಿತ್ಯ ರಾವ್ ಗೆ ದ.ಕ. ಜಿಲ್ಲಾ 4ನೇ ಹೆಚ್ಚುವರಿ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿದೆ.

ಆದಿತ್ಯ ರಾವ್ 2020, ಜನವರಿ 20ರಂದು ಆಟೋರಿಕ್ಷಾವೊಂದರಲ್ಲಿ ಬಂದು ವಿಮಾನ ನಿಲ್ದಾಣದ ನಿರ್ಗಮನ ದ್ವಾರದ ಬಳಿ ಸ್ಫೋಟಕ ತುಂಬಿದ್ದ ಬ್ಯಾಗೊಂದನ್ನು ಇಟ್ಟು ಅದೇ ರಿಕ್ಷಾದಲ್ಲಿ ಪರಾರಿಯಾಗಿದ್ದ. ಭದ್ರತಾ ಸಿಬ್ಬಂದಿಗಳು ಅನಾಥವಾಗಿರುವ ಬ್ಯಾಗನ್ನು ಕಂಡು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಅನಾಥ ಬ್ಯಾಗ್ ನ ವಿಷಯ ಹೊರಬರುತ್ತಿದ್ದಂತೆ ಕೆಲವು ಖಾಸಗಿ ವಾಹಿನಿಗಳು ಇಡೀ ದಿನ ಈ ಕುರಿತು ಊಹಾಪೋಹ ವರದಿ ಮಾಡಿದ್ದವು. ನಂತರ ಸಿಸಿ ಕ್ಯಾಮೆರಾ ಫೂಟೇಜ್ ನೋಡಿದ ಬಳಿಕ ಆರೋಪಿಯ ಸುಳಿವು ಪಡೆಯುವಲ್ಲಿ ಪೊಲೀಸರು ಯಶಸ್ವಿಯಾದರು. ಈ ನಡುವೆ ಆರೋಪಿ ಆದಿತ್ಯ ರಾವ್ ಬೆಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕರ ಮುಂದೆ ಶರಣಾಗಿದ್ದ.

ಇತ್ತೀಚಿನ ಸುದ್ದಿ

ಜಾಹೀರಾತು