2:04 AM Thursday3 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಇಡೀ ಮಂಗಳೂರನ್ನೇ ತುದಿಗಾಲಿನಲ್ಲಿ ನಿಲ್ಲಿಸಿದ್ದ ಬಾಂಬ್ ಪ್ರಕರಣ: ಆರೋಪಿ ಆದಿತ್ಯ ರಾವ್ ಗೆ 20 ವರ್ಷ ಜೈಲು

16/03/2022, 22:37

ಮಂಗಳೂರು(reporterkarnataka.com): ಇಡೀ ಮಂಗಳೂರನ್ನೇ ತುದಿಗಾಲಿನಲ್ಲಿ ನಿಲ್ಲಿಸಿದ ಬಾಂಬ್ ಪ್ರಕರಣ ತೀರ್ಪು ಹೊರಬಿದ್ದಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಪ್ರಕರಣದ ಆರೋಪಿ ಆದಿತ್ಯ ರಾವ್ ಗೆ ದ.ಕ. ಜಿಲ್ಲಾ 4ನೇ ಹೆಚ್ಚುವರಿ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿದೆ.

ಆದಿತ್ಯ ರಾವ್ 2020, ಜನವರಿ 20ರಂದು ಆಟೋರಿಕ್ಷಾವೊಂದರಲ್ಲಿ ಬಂದು ವಿಮಾನ ನಿಲ್ದಾಣದ ನಿರ್ಗಮನ ದ್ವಾರದ ಬಳಿ ಸ್ಫೋಟಕ ತುಂಬಿದ್ದ ಬ್ಯಾಗೊಂದನ್ನು ಇಟ್ಟು ಅದೇ ರಿಕ್ಷಾದಲ್ಲಿ ಪರಾರಿಯಾಗಿದ್ದ. ಭದ್ರತಾ ಸಿಬ್ಬಂದಿಗಳು ಅನಾಥವಾಗಿರುವ ಬ್ಯಾಗನ್ನು ಕಂಡು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಅನಾಥ ಬ್ಯಾಗ್ ನ ವಿಷಯ ಹೊರಬರುತ್ತಿದ್ದಂತೆ ಕೆಲವು ಖಾಸಗಿ ವಾಹಿನಿಗಳು ಇಡೀ ದಿನ ಈ ಕುರಿತು ಊಹಾಪೋಹ ವರದಿ ಮಾಡಿದ್ದವು. ನಂತರ ಸಿಸಿ ಕ್ಯಾಮೆರಾ ಫೂಟೇಜ್ ನೋಡಿದ ಬಳಿಕ ಆರೋಪಿಯ ಸುಳಿವು ಪಡೆಯುವಲ್ಲಿ ಪೊಲೀಸರು ಯಶಸ್ವಿಯಾದರು. ಈ ನಡುವೆ ಆರೋಪಿ ಆದಿತ್ಯ ರಾವ್ ಬೆಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕರ ಮುಂದೆ ಶರಣಾಗಿದ್ದ.

ಇತ್ತೀಚಿನ ಸುದ್ದಿ

ಜಾಹೀರಾತು