1:44 AM Thursday1 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಇಡೀ ಮಂಗಳೂರನ್ನೇ ತುದಿಗಾಲಿನಲ್ಲಿ ನಿಲ್ಲಿಸಿದ್ದ ಬಾಂಬ್ ಪ್ರಕರಣ: ಆರೋಪಿ ಆದಿತ್ಯ ರಾವ್ ಗೆ 20 ವರ್ಷ ಜೈಲು

16/03/2022, 22:37

ಮಂಗಳೂರು(reporterkarnataka.com): ಇಡೀ ಮಂಗಳೂರನ್ನೇ ತುದಿಗಾಲಿನಲ್ಲಿ ನಿಲ್ಲಿಸಿದ ಬಾಂಬ್ ಪ್ರಕರಣ ತೀರ್ಪು ಹೊರಬಿದ್ದಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಪ್ರಕರಣದ ಆರೋಪಿ ಆದಿತ್ಯ ರಾವ್ ಗೆ ದ.ಕ. ಜಿಲ್ಲಾ 4ನೇ ಹೆಚ್ಚುವರಿ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿದೆ.

ಆದಿತ್ಯ ರಾವ್ 2020, ಜನವರಿ 20ರಂದು ಆಟೋರಿಕ್ಷಾವೊಂದರಲ್ಲಿ ಬಂದು ವಿಮಾನ ನಿಲ್ದಾಣದ ನಿರ್ಗಮನ ದ್ವಾರದ ಬಳಿ ಸ್ಫೋಟಕ ತುಂಬಿದ್ದ ಬ್ಯಾಗೊಂದನ್ನು ಇಟ್ಟು ಅದೇ ರಿಕ್ಷಾದಲ್ಲಿ ಪರಾರಿಯಾಗಿದ್ದ. ಭದ್ರತಾ ಸಿಬ್ಬಂದಿಗಳು ಅನಾಥವಾಗಿರುವ ಬ್ಯಾಗನ್ನು ಕಂಡು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಅನಾಥ ಬ್ಯಾಗ್ ನ ವಿಷಯ ಹೊರಬರುತ್ತಿದ್ದಂತೆ ಕೆಲವು ಖಾಸಗಿ ವಾಹಿನಿಗಳು ಇಡೀ ದಿನ ಈ ಕುರಿತು ಊಹಾಪೋಹ ವರದಿ ಮಾಡಿದ್ದವು. ನಂತರ ಸಿಸಿ ಕ್ಯಾಮೆರಾ ಫೂಟೇಜ್ ನೋಡಿದ ಬಳಿಕ ಆರೋಪಿಯ ಸುಳಿವು ಪಡೆಯುವಲ್ಲಿ ಪೊಲೀಸರು ಯಶಸ್ವಿಯಾದರು. ಈ ನಡುವೆ ಆರೋಪಿ ಆದಿತ್ಯ ರಾವ್ ಬೆಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕರ ಮುಂದೆ ಶರಣಾಗಿದ್ದ.

ಇತ್ತೀಚಿನ ಸುದ್ದಿ

ಜಾಹೀರಾತು