2:40 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

7ನೇ ವೇತನ ಆಯೋಗ ರಚನೆ: ರಾಜ್ಯ ಸರಕಾರಿ ನೌಕರರಿಗೆ ಮುಖ್ಯಮಂತ್ರಿ ಭರ್ಜರಿ ಸಿಹಿಸುದ್ದಿ

17/03/2022, 09:33

ಬೆಂಗಳೂರು(reporterkarnataka.com):

ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗಾಗಿ ಸರ್ಕಾರದಿಂದ ಆಯೋಗ ರಚನೆ ಮಾಡೋದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಈಗಾಗಲೇ ಸಿಎಂ ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರಿ ನೌಕರರಿಗೆ  ವೇತನ ತಾರತಮ್ಯ ಬಗ್ಗೆ ಕೇಳಲಾದಂತ ಚುಕ್ಕೆ ಗುರುತಿನ ಪ್ರಶ್ನೆಗೆ ವೇತನ ಪರಿಷ್ಕರಿಸೋದಕ್ಕೆ ಆಯೋಗ ರಚನೆ ಮಾಡೋದಾಗಿ ತಿಳಿಸಿದ್ದರು. ಇದೀಗ ಇಂದು ವಿಧಾನಸಭೆಯಲ್ಲಿ, ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗಾಗಿ ಸರ್ಕಾರದಿಂದ ಆಯೋಗ ರಚನೆ ಮಾಡೋದಾಗಿ ಘೋಷಣೆ ಮಾಡಿದ್ದಾರೆ.

ಬುಧವಾರ ವಿಧಾನಸಭೆಯಲ್ಲಿ ಈ ಬಗ್ಗೆ ಸದಸ್ಯರು ಕೇಳಿದಂತ ಪ್ರಶ್ನೆಗೆ ಉತ್ತರಿಸಿದಂತ ಸಿಎಂ ಬಸವರಾಜ ಬೊಮ್ಮಾಯಿಯವರು, ಈಗಾಗಲೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು 7ನೇ ವೇತನ ಆಯೋಗದ ಅನ್ವಯ ಕೇಂದ್ರ ಸರ್ಕಾರಿ ನೌಕರರಿಗೆ ವೇತನ ನೀತಿ ಜಾರಿಗೊಳಿಸಲಾಗಿದೆ. ರಾಜ್ಯ ಸರ್ಕಾರಿ ನೌಕರರಿಗೂ ವೇತನ ಪರಿಷ್ಕರಣೆ ಸಲುವಾಗಿ ಸಮಿತಿ ರಚಿಸುವಂತೆ ಪತ್ರ ಬರೆದಿರೋದಾಗಿ ಹೇಳಿದರು.

ಸರ್ಕಾರಿ ನೌಕರರ ವೇತನ ಪರಿಷ್ಕರಣ ಸಂಬಂಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ. ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸರ್ಕಾರದಿಂದ ಆಯೋಗ ರಚನೆ ಮಾಡೋದಾಗಿ ಸಿಎಂ ಬೊಮ್ಮಾಯಿ ಇದೇ ಸಂದರ್ಭದಲ್ಲಿ ಘೋಷಣೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು