2:40 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಹಿಜಾಬ್ ತೀರ್ಪು: ಮಂಗಳೂರಿನ ಹಳೆ ಬಂದರು, ಧಕ್ಕೆ, ಉಳ್ಳಾಲ ಪ್ರದೇಶದಲ್ಲಿ ವ್ಯಾಪಾರಿಗಳಿಂದ ಬಂದ್ ಆಚರಣೆ

17/03/2022, 10:53

ಮಂಗಳೂರು(reporterkarnataka.com): ಹಿಜಾಬ್ ಕುರಿತು ರಾಜ್ಯ ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರತಿಭಟಿಸಿ ಇಂದು ಮಂಗಳೂರಿನಲ್ಲಿ ಮುಸ್ಲಿಂ ವ್ಯಾಪಾರಿಗಳು ಅಂಗಡಿ ಮುಂಗಟ್ಟು ಬಂದ್ ಮಾಡಿ ಬಂದ್ ಗೆ ಬೆಂಬಲ ವ್ಯಕ್ತಪಡಿಸಿದರು. ಕರ್ನಾಟಕ ಅಮೀರ್ ಎ ಶರೀಯತ್ ನ ಮೌಲಾನಾ ಸಗೀರ್ ಅಹ್ಮದ್ ರಾಜ್ಯ ಬಂದ್ ಗೆ ಕರೆ ನೀಡಿದ್ದರು.

ಮುಸ್ಲಿಂ ಸಮುದಾಯಕ್ಕೆ ಸೇರಿದ ಬಹುತೇಕ ಅಂಗಡಿ, ಮಳಿಗೆ, ವಾಣಿಜ್ಯ ಸಂಕೀರ್ಣ, ಹೋಟೆಲ್ ಬಂದ್ ನಲ್ಲಿ ಪಾಲ್ಗೊಂಡಿದ್ದವು. 

ನಗರದ ಬಂದರು, ಧಕ್ಕೆ, ಕಂಡತಪಳ್ಳಿ ಪ್ರದೇಶದಲ್ಲಿ ಮುಸ್ಲಿಮರು ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿದ್ದರು. ಸ್ಟೇಟ್ ಬ್ಯಾಂಕ್, ಮಾರುಕಟ್ಟೆ ರಸ್ತೆಯಲ್ಲಿ ಬೀದಿ ವ್ಯಾಪಾರಿಗಳಿಲ್ಲದೆ ಬಿಕೋ ಎನ್ನುತ್ತಿತ್ತು. ಕೆಲವು ಶಿಕ್ಷಣ ಸಂಸ್ಥೆಗಳು ಹಾಗೂ ಮದ್ರಸಾಗಳು ಬಂದ್ ನಲ್ಲಿ ಪಾಲ್ಗೊಂಡಿದ್ದವು. ನಗರದ ಹೊರವಲಯದ ಉಳ್ಳಾಲ, ತೊಕ್ಕೊಟ್ಟು ಪ್ರದೇಶದಲ್ಲಿಯೂ ಬಂದ್ ಆಚರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು