3:13 AM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಹಿಜಾಬ್ ತೀರ್ಪು: ಮಂಗಳೂರಿನ ಹಳೆ ಬಂದರು, ಧಕ್ಕೆ, ಉಳ್ಳಾಲ ಪ್ರದೇಶದಲ್ಲಿ ವ್ಯಾಪಾರಿಗಳಿಂದ ಬಂದ್ ಆಚರಣೆ

17/03/2022, 10:53

ಮಂಗಳೂರು(reporterkarnataka.com): ಹಿಜಾಬ್ ಕುರಿತು ರಾಜ್ಯ ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರತಿಭಟಿಸಿ ಇಂದು ಮಂಗಳೂರಿನಲ್ಲಿ ಮುಸ್ಲಿಂ ವ್ಯಾಪಾರಿಗಳು ಅಂಗಡಿ ಮುಂಗಟ್ಟು ಬಂದ್ ಮಾಡಿ ಬಂದ್ ಗೆ ಬೆಂಬಲ ವ್ಯಕ್ತಪಡಿಸಿದರು. ಕರ್ನಾಟಕ ಅಮೀರ್ ಎ ಶರೀಯತ್ ನ ಮೌಲಾನಾ ಸಗೀರ್ ಅಹ್ಮದ್ ರಾಜ್ಯ ಬಂದ್ ಗೆ ಕರೆ ನೀಡಿದ್ದರು.

ಮುಸ್ಲಿಂ ಸಮುದಾಯಕ್ಕೆ ಸೇರಿದ ಬಹುತೇಕ ಅಂಗಡಿ, ಮಳಿಗೆ, ವಾಣಿಜ್ಯ ಸಂಕೀರ್ಣ, ಹೋಟೆಲ್ ಬಂದ್ ನಲ್ಲಿ ಪಾಲ್ಗೊಂಡಿದ್ದವು. 

ನಗರದ ಬಂದರು, ಧಕ್ಕೆ, ಕಂಡತಪಳ್ಳಿ ಪ್ರದೇಶದಲ್ಲಿ ಮುಸ್ಲಿಮರು ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿದ್ದರು. ಸ್ಟೇಟ್ ಬ್ಯಾಂಕ್, ಮಾರುಕಟ್ಟೆ ರಸ್ತೆಯಲ್ಲಿ ಬೀದಿ ವ್ಯಾಪಾರಿಗಳಿಲ್ಲದೆ ಬಿಕೋ ಎನ್ನುತ್ತಿತ್ತು. ಕೆಲವು ಶಿಕ್ಷಣ ಸಂಸ್ಥೆಗಳು ಹಾಗೂ ಮದ್ರಸಾಗಳು ಬಂದ್ ನಲ್ಲಿ ಪಾಲ್ಗೊಂಡಿದ್ದವು. ನಗರದ ಹೊರವಲಯದ ಉಳ್ಳಾಲ, ತೊಕ್ಕೊಟ್ಟು ಪ್ರದೇಶದಲ್ಲಿಯೂ ಬಂದ್ ಆಚರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು