7:39 PM Friday21 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

ರಾಜ್ಯ ಬಂದ್ ಕರೆಗೆ ಶ್ರೀನಿವಾಸಪುರದಲ್ಲಿ ಬೆಂಬಲ: ಮುಸ್ಲಿಮರ ಅಂಗಡಿ- ಮುಂಗಟ್ಟು, ಶಿಕ್ಷಣ ಸಂಸ್ಥೆಗಳು ಬಂದ್

17/03/2022, 18:10

ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಹಿಜಾಬ್ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ನೀಡಿರುವ ತೀರ್ಪನ್ನು ವಿರೋಧಿಸಿ ಕರ್ನಾಟಕ ಅಮೀರ್ ಎ ಶರೀಯತ್‌ನ ಮೌಲಾನಾ ಸಗೀರ್ ಅಹ್ಮದ್ ಕರೆ ನೀಡಿರುವ ರಾಜ್ಯ ಬಂದ್‌ಗೆ ಶ್ರೀನಿವಾಸಪುರದಲ್ಲಿ ಗುರುವಾರ ಬೆಂಬಲ ವ್ಯಕ್ತವಾಗಿದೆ.


ಮುಸ್ಲಿಮರಿಗೆ ಸೇರಿದ ಬಹುತೇಕ ಅಂಗಡಿಗಳು , ಮಳಿಗೆಗಳು , ಹೊಟೇಲ್ ಗಳು ತೆರೆಯಲಿಲ್ಲ . ಕೆಲವು ಶಿಕ್ಷಣ ಸಂಸ್ಥೆಗಳು , ಮದ್ರಸಗಳಿಗೆ ರಜೆ ಸಾರಲಾಗಿದೆ. ಆಜಾದ್ ರಸ್ತೆ, ರಾಜಾಜಿ ರಸ್ತೆ, ಟಿಪ್ಪು ಸರ್ಕಲ್, ತರಕಾರಿ ಮಾರುಕಟ್ಟೆ, ಮಟನ್ ಮಾರ್ಕೆಟ್, ವ್ಯವಹಾರ ಚಟುವಟಿಕೆಗಳು ಸ್ಥಗಿತಗೊಂಡಿವೆ . 

ಮುಸ್ಲಿಂ ಮಾಲಕತ್ವದ ಕಚೇರಿಗಳು , ಅಂಗಡಿಗಳು , ಮಳಿಗೆಗಳು , ಹೊಟೇಲ್ ಗಳು ವರ್ಕ್ ಶಾಪ್‌ಗಳು , ಅಂಚೆ ಕಛೇರಿ ರಸ್ತೆಯ ಫುಟ್ ವೀರ್ ಅಂಗಡಿಗಳು, ಗುತ್ತಿಗೆ ಸಂಸ್ಥೆಗಳು ಕೂಡ ಮುಚ್ಚಲ್ಪಟ್ಟಿವೆ .

ಮುಸ್ಲಿಂ ಸಂಘಟನೆಗಳೂ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿವೆ .

ಇತ್ತೀಚಿನ ಸುದ್ದಿ

ಜಾಹೀರಾತು