12:53 PM Wednesday17 - December 2025
ಬ್ರೇಕಿಂಗ್ ನ್ಯೂಸ್
Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ…

ಇತ್ತೀಚಿನ ಸುದ್ದಿ

ಸಂಪಾಜೆ: ಟಯರ್ ಸ್ಫೋಟಗೊಂಡು ಹೊಳೆಗೆ ಉರುಳಿದ ಬಸ್; 4 ಮಂದಿ ಗಂಭೀರ, ಹಲವರಿಗೆ ಗಾಯ

18/03/2022, 00:58

ಸುಳ್ಯ(reporterkarnataka.com): ಮಾಣಿ – ಮೈಸೂರು ರಾಷ್ಟೀಯ ಹೆದ್ದಾರಿಯ ಸಂಪಾಜೆ ಗಡಿಕಲ್ಲು ಬಳಿ ಎದುರಿನ ಚಕ್ರ ಸ್ಫೋಟಗೊಂಡು ಸರಕಾರಿ ಬಸ್ಸೊಂದು ರಸ್ತೆ ಬದಿಯ ಹೊಳೆಗೆ ಉರುಳಿದ ಪರಿಣಾಮ ಬಸ್ಸಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡು 30ಕ್ಕೂ ಹೆಚ್ಚು ಮಂದಿ ಸಣ್ಣಪುಟ್ಟ ಗಾಯಗೊಂಡ ಘಟನೆ ನಡೆದಿದೆ.

ಧರ್ಮಸ್ಥಳದಿಂದ – ಗುಂಡ್ಲುಪೇಟೆಗೆ ತೆರಳುತ್ತಿದ್ದ ಬಸ್ ಸಂಪಾಜೆಯ ಗಡಿಕಲ್ಲು ಎಂಬಲ್ಲಿ ಟಯರ್ ಸ್ಪೋಟಗೊಂಡು ರಸ್ತೆಯಿಂದ ಹೊಳೆಗೆ ಬಸ್ ಪಲ್ಟಿಯಾಗಿದೆ.

ಘಟನೆಯಲ್ಲಿ ಚಾಲಕ ಸೇರಿದಂತೆ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಉಳಿದ ಪ್ರಯಾಣಿಕರಿಗೂ ಗಾಯಗಳಾಗಿವೆ.

ಗಾಯಾಳುಗಳನ್ನು ಸುಳ್ಯದ ಆಸ್ಪತ್ರೆಗೆ ತಂದು ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು