7:42 PM Sunday21 - June 2026
ಬ್ರೇಕಿಂಗ್ ನ್ಯೂಸ್
Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ…

ಇತ್ತೀಚಿನ ಸುದ್ದಿ

ಮಗು ಅದಲು-ಬದಲು ಪ್ರಕರಣ ಸುಖಾಂತ್ಯ: ದೂರುದಾರರೇ ಮಗುವಿನ ತಂದೆ ಎಂದ ಡಿಎನ್ ಎ ಪರೀಕ್ಷಾ ವರದಿ

18/03/2022, 16:19

ಮಂಗಳೂರು(reporterkarnataka.com): ನಗರದ ಲೇಡಿಗೋಶನ್ ಸರಕಾರಿ ಆಸ್ಪತ್ರೆಯಲ್ಲಿ 

ನಡೆದಿದೆ ಎನ್ನಲಾದ ಮಗು ಅದಲು -ಬದಲು ಪ್ರಕರಣ ಕ್ಲೈಮಾಕ್ಸ್ ಹಂತಕ್ಕೆ ಬಂದಿದೆ. ಹೈದರಾಬಾದ್‌ನ ‍ಪ್ರಯೋಗಾಲಯದಲ್ಲಿ ನಡೆಸಲಾಗಿದ್ದ ಮಗು ಮತ್ತು ಮಗುವಿನ ತಂದೆಯ ಡಿಎನ್‌ಎ ಪರೀಕ್ಷೆಯ ವರದಿಯಲ್ಲಿ ಮಗು ದೂರುದಾರರದ್ದೇ ಎನ್ನುವುದು ಖಚಿತವಾಗಿದೆ.

ತನಗೆ ಜನಿಸಿದ ಆರೋಗ್ಯವಂತ ಹೆಣ್ಣು ಮಗುವನ್ನು ಬದಲಿಸಿ, ಆಸ್ಪತ್ರೆಯ ಸಿಬ್ಬಂದಿ ಅನಾರೋಗ್ಯ ಪೀಡಿತ ಗಂಡು ಮಗುವನ್ನು ನೀಡಿದ್ದಾರೆ ಎಂದು ಆರೋಪಿಸಿ ಮಗುವಿನ ತಂದೆ ಮುಸ್ತಾಫಾ ಅವರು ಮಂಗಳೂರು ಉತ್ತರ ಠಾಣೆಗೆ ದೂರು ನೀಡಿದ್ದರು. ಈ ಕುರಿತು ನ್ಯಾಯಾಲಯವು ಮಗು ಮತ್ತು ಹೆತ್ತವರ ಡಿಎನ್ ಎ ಪರೀಕ್ಷೆಗೆ ಒಪ್ಪಿಗೆ ನೀಡಿತ್ತು. ಡಿಎನ್ ಎ ಪರೀಕ್ಷೆ ನಡೆದ ಬಳಿಕ ಸ್ಯಾಂಪಲನ್ನು ಹೈದರಾಬಾದ್ ನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಇದೀಗ ವರದಿ ತನಿಖಾಧಿಕಾರಿಯ ಕೈ ಸೇರಿದ್ದು, ಮಗು ದೂರು ನೀಡಿದ ಮುಸ್ತಾಫ ಅವರದ್ದೇ ಎಂದು ಸಾಬೀತಾಗಿದೆ.ಈ ವರದಿಯ ಆಧಾರದಲ್ಲಿ ಪ್ರಕರಣದ ಬಗ್ಗೆ ನ್ಯಾಯಾಲಯಕ್ಕೆ ‘ಬಿ’ ರಿಪೋರ್ಟ್‌ ಸಲ್ಲಿಸಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಏನಿದು ಪ್ರಕರಣ?: ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಯಲ್ಲಿ ಮುಸ್ತಫಾ ಅವರ ಪತ್ನಿ 2021ರ ಸೆಪ್ಟೆಂಬರ್‌ 27ರಂದು ಗಂಡು ಮಗುವಿಗೆ ಜನ್ಮ ನೀಡಿದ್ದರು. ಆದರೆ ಆಸ್ಪತ್ರೆಯ ಸಿಬ್ಬಂದಿಯ ಅಚಾತುರ್ಯದಿಂದ

ಜನ್ಮ ದಾಖಲೆ ಪತ್ರದ ಲಿಂಗ ಕಾಲಂನಲ್ಲಿ ’ಗಂಡು ಮಗು’ ಬದಲು ’ಹೆಣ್ಣು ಮಗು’ ಎಂಬುದಾಗಿ ದಾಖಲಿಸಲಾಗಿತ್ತು. ಮಗುವಿನ ತೂಕ ಕೇವಲ 1.4 ಕೆ.ಜಿ. ಯಷ್ಟಿತ್ತು. ಅಲ್ಲದೆ, ಮಗುವಿನಲ್ಲಿ ಉಸಿರಾಟದ ತೊಂದರೆಯೂ ಕಾಣಿಸಿದ್ದರಿಂದ ಕೂಡಲೇ ಅದನ್ನು ನವಜಾತ ಶಿಶುಗಳ ತೀವ್ರನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿತ್ತು. ಆದರೆ ದಾಖಲೆಯಲ್ಲಿ ಹೆಣ್ಣು ಮಗು ಇದ್ದು, ಕೈಗೆ ಗಂಡು ಮಗುವನ್ನು ನೀಡಿದ್ದಾರೆ ಎಂದು ಆರೋಪಿಸಿ ಮುಸ್ತಫಾ ಅವರು ಆಸ್ಪತ್ರೆಯ ವಿರುದ್ದ ಉತ್ತರ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಮುಸ್ತಫಾ ಅವರ ದೂರಿನ ಆಧಾರದಲ್ಲಿ ಮಗುವಿನ ಡಿಎನ್‌ಎ ಪರೀಕ್ಷೆ ನಡೆಸಲು ನ್ಯಾಯಾಲಯವೂ ಒಪ್ಪಿಗೆ ಸೂಚಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು