3:40 AM Thursday13 - August 2026
ಬ್ರೇಕಿಂಗ್ ನ್ಯೂಸ್
ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ

ಇತ್ತೀಚಿನ ಸುದ್ದಿ

ರಸ್ತೆ ಅಪಘಾತ: ಗಾಯಾಳು ಸಹಾಯಕ ಪೊಲೀಸ್ ಉಪ ನಿರೀಕ್ಷಕ ಸದಾಶಿವ ಮೃತ್ಯು

18/03/2022, 21:23

ಮಂಗಳೂರು(reporterkarnataka.com):

ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ
ಸಹಾಯಕ ಪೊಲೀಸ್ ಉಪ ನಿರೀಕ್ಷಕ ಸದಾಶಿವ ಅವರು ಮೃತಪಟ್ಟಿದ್ದಾರೆ.

ಅವರು ಮಾ. 14 ರಂದು ರಾತ್ರಿ 9-10ರ ವೇಳೆಗೆ
ಸಂಚಾರ ನಿಯಂತ್ರಣ ಕರ್ತವ್ಯದ ಬಗ್ಗೆ ಕೊಟ್ಟಾರ ಚೌಕಿ ಕಡೆಗೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಕೊಟ್ಟಾರ ಚೌಕಿಯ  ಅಮರಾನ್ ಬ್ಯಾಟರಿ ಸೇಲ್ಸ್ ಮತ್ತು ಸರ್ವಿಸ್  ಬಳಿ ರಸ್ತೆ ಅಪಘಾತಕ್ಕೀಡಾಗಿದ್ದರು. ತೀವ್ರವಾಗಿ ಗಾಯಗೊಂಡ ಅವರನ್ನು ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿರುತ್ತಾರೆ.

ಸದಾಶಿವ ಅವರು1993ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿದ್ದರು.ಅವರು ಪೊಲೀಸ್ ಕಾನ್ ಸ್ಟೇಬಲ್ ಆಗಿ ಮೊದಲಿಗೆ ಪಡುಬಿದ್ರೆ ಪೊಲೀಸ್ ಠಾಣೆ, ಸಂಚಾರ ಪೂರ್ವ ಪೊಲೀಸ್ ಠಾಣೆ, ಸಂಚಾರ ಪಶ್ಚಿಮ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ನಂತರ ಹೆಡ್ ಕಾನ್ ಸ್ಟೇಬಲ್ ಆಗಿ ಫಾರೆಸ್ಟ್ ಸ್ಕ್ಯಾಡ್,  ಸಂಚಾರ ಉತ್ತರ ಪೊಲೀಸ್ ಠಾಣೆ, ಸಿಎಸ್ಬಿ ಘಟಕದಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.

2019, ಜೂನ್  ನಿಂದದ ಸಂಚಾರ ಪೂರ್ವ ಪೊಲೀಸ್ ಠಾಣೆಯಲ್ಲಿ ಸಹಾಯಕ ಪೊಲೀಸ್ ಉಪ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದರು.

 

ಇತ್ತೀಚಿನ ಸುದ್ದಿ

ಜಾಹೀರಾತು