2:55 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಕೊರೊನಾ ಲಾಕ್ ಡೌನ್ ನಿಂದ ಆರ್ಥಿಕ ಮುಗ್ಗಟ್ಟು: ಕದ್ರಿಕಂಬ್ಲ ಸಮೀಪ ದಂಪತಿ ಆತ್ಮಹತ್ಯೆಗೆ ಶರಣು

09/06/2021, 18:12

ಮಂಗಳೂರು(reporterkarnataka news): ಲಾಕ್ ಡೌನ್ ನಿಂದ ಆರ್ಥಿಕ ಸಮಸ್ಯೆಗೆ ಸಿಲುಕಿದ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಗರದ ಕದ್ರಿಕಂಬ್ಲ ಸಮೀಪದ ಪಿಂಟೋ ಲೇನ್ ನಲ್ಲಿ ನಡೆದಿದೆ.

ಸುರೇಶ್ ಶೆಟ್ಟಿ(62) ಹಾಗೂ ವಾಣಿ(57) ದಂಪತಿ ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಸುರೇಶ್  ಶೆಟ್ಟಿ ಅವರು ಪ್ರಸಿದ್ಧ ತಬ್ಲಾ ವಾದಕರು. ಆರ್ಕೇಸ್ಟ್ರಾಗಳಲ್ಲಿ ತಬ್ಲಾ ನುಡಿಸುತ್ತಿದ್ದರು. ವಾಣಿ ಅವರು ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ನೌಕರಿ ಮಾಡುತ್ತಿದ್ದರು. ಅದರ ಜತೆಗೆ ಚಿಟ್ ಫಂಡ್ ನಡೆಸುತ್ತಿದ್ದರು. ಕೊರೊನಾ ಲಾಕ್ ಡೌನ್ ಆಗಿರುವುದರಿಂದ ಚಿಟ್ ಫಂಡ್ ಕಲೆಕ್ಷನ್ ಸರಿಯಾಗಿ ಆಗುತ್ತಿರಲಿಲ್ಲ. ಈ ಮಧ್ಯೆ ಹೂಡಿಕೆ ಮಾಡಿದವರಲ್ಲಿ ಕೆಲವರು ಕರೆ ಮಾಡಿ ಹಣ ಹಿಂತಿರುಗಿಸುವಂತೆ ಪೀಡಿಸುತ್ತಿದ್ದರು. ಇದರಿಂದ ನೊಂದ ವಾಣಿ ಅವರು ಬುಧವಾರ ಬೆಳಗ್ಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾದರು. ಈ ವಿಷಯ ಅರಿತ ಪತಿ ಸುರೇಶ್ ಶೆಟ್ಟಿ ಅವರು ತಕ್ಷಣ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಶಶಿ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಮಾಧ್ಯಮ ಜತೆ ಮಾತನಾಡಿದ ಪೊಲೀಸ್ ಕಮಿಷನರ್, ಬಹಳ ದುಃಖಕರ ವಿಷಯ. ಇದನ್ನು ಅವರು ಪೊಲೀಸರ ಗಮನಕ್ಕೆ ತರುತ್ತಿದ್ದರೆ, ಹಣಕ್ಕಾಗಿ ಒತ್ತಡ ಹಾಕುತ್ತಿರುವವರನ್ನು ಕರೆಸಿ ಮಾತುಕತೆ ನಡೆಸಬಹುದಿತ್ತು. ಹಣ ಮರು ಪಾವತಿಗೆ ಕಾಲಾವಕಾಶ ಕೇಳಿ ಸಮಸ್ಯೆ ಪರಿಹರಿಸಬಹುದಿತ್ತು. 

ಸಾಲ, ಇಎಂ ಐ ಕಟ್ಟಲು ಯಾರಾದರೂ ಪೀಡಿಸಿದರೆ ತಕ್ಷಣ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಎಂದು ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು