2:54 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಕೊರೊನಾ ಲಾಕ್ ಡೌನ್ ನಿಂದ ಆರ್ಥಿಕ ಮುಗ್ಗಟ್ಟು: ಕದ್ರಿಕಂಬ್ಲ ಸಮೀಪ ದಂಪತಿ ಆತ್ಮಹತ್ಯೆಗೆ ಶರಣು

09/06/2021, 18:12

ಮಂಗಳೂರು(reporterkarnataka news): ಲಾಕ್ ಡೌನ್ ನಿಂದ ಆರ್ಥಿಕ ಸಮಸ್ಯೆಗೆ ಸಿಲುಕಿದ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಗರದ ಕದ್ರಿಕಂಬ್ಲ ಸಮೀಪದ ಪಿಂಟೋ ಲೇನ್ ನಲ್ಲಿ ನಡೆದಿದೆ.

ಸುರೇಶ್ ಶೆಟ್ಟಿ(62) ಹಾಗೂ ವಾಣಿ(57) ದಂಪತಿ ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಸುರೇಶ್  ಶೆಟ್ಟಿ ಅವರು ಪ್ರಸಿದ್ಧ ತಬ್ಲಾ ವಾದಕರು. ಆರ್ಕೇಸ್ಟ್ರಾಗಳಲ್ಲಿ ತಬ್ಲಾ ನುಡಿಸುತ್ತಿದ್ದರು. ವಾಣಿ ಅವರು ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ನೌಕರಿ ಮಾಡುತ್ತಿದ್ದರು. ಅದರ ಜತೆಗೆ ಚಿಟ್ ಫಂಡ್ ನಡೆಸುತ್ತಿದ್ದರು. ಕೊರೊನಾ ಲಾಕ್ ಡೌನ್ ಆಗಿರುವುದರಿಂದ ಚಿಟ್ ಫಂಡ್ ಕಲೆಕ್ಷನ್ ಸರಿಯಾಗಿ ಆಗುತ್ತಿರಲಿಲ್ಲ. ಈ ಮಧ್ಯೆ ಹೂಡಿಕೆ ಮಾಡಿದವರಲ್ಲಿ ಕೆಲವರು ಕರೆ ಮಾಡಿ ಹಣ ಹಿಂತಿರುಗಿಸುವಂತೆ ಪೀಡಿಸುತ್ತಿದ್ದರು. ಇದರಿಂದ ನೊಂದ ವಾಣಿ ಅವರು ಬುಧವಾರ ಬೆಳಗ್ಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾದರು. ಈ ವಿಷಯ ಅರಿತ ಪತಿ ಸುರೇಶ್ ಶೆಟ್ಟಿ ಅವರು ತಕ್ಷಣ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಶಶಿ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಮಾಧ್ಯಮ ಜತೆ ಮಾತನಾಡಿದ ಪೊಲೀಸ್ ಕಮಿಷನರ್, ಬಹಳ ದುಃಖಕರ ವಿಷಯ. ಇದನ್ನು ಅವರು ಪೊಲೀಸರ ಗಮನಕ್ಕೆ ತರುತ್ತಿದ್ದರೆ, ಹಣಕ್ಕಾಗಿ ಒತ್ತಡ ಹಾಕುತ್ತಿರುವವರನ್ನು ಕರೆಸಿ ಮಾತುಕತೆ ನಡೆಸಬಹುದಿತ್ತು. ಹಣ ಮರು ಪಾವತಿಗೆ ಕಾಲಾವಕಾಶ ಕೇಳಿ ಸಮಸ್ಯೆ ಪರಿಹರಿಸಬಹುದಿತ್ತು. 

ಸಾಲ, ಇಎಂ ಐ ಕಟ್ಟಲು ಯಾರಾದರೂ ಪೀಡಿಸಿದರೆ ತಕ್ಷಣ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಎಂದು ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು