12:35 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕೊರೊನಾ ಲಾಕ್ ಡೌನ್ ನಿಂದ ಆರ್ಥಿಕ ಮುಗ್ಗಟ್ಟು: ಕದ್ರಿಕಂಬ್ಲ ಸಮೀಪ ದಂಪತಿ ಆತ್ಮಹತ್ಯೆಗೆ ಶರಣು

09/06/2021, 18:12

ಮಂಗಳೂರು(reporterkarnataka news): ಲಾಕ್ ಡೌನ್ ನಿಂದ ಆರ್ಥಿಕ ಸಮಸ್ಯೆಗೆ ಸಿಲುಕಿದ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಗರದ ಕದ್ರಿಕಂಬ್ಲ ಸಮೀಪದ ಪಿಂಟೋ ಲೇನ್ ನಲ್ಲಿ ನಡೆದಿದೆ.

ಸುರೇಶ್ ಶೆಟ್ಟಿ(62) ಹಾಗೂ ವಾಣಿ(57) ದಂಪತಿ ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಸುರೇಶ್  ಶೆಟ್ಟಿ ಅವರು ಪ್ರಸಿದ್ಧ ತಬ್ಲಾ ವಾದಕರು. ಆರ್ಕೇಸ್ಟ್ರಾಗಳಲ್ಲಿ ತಬ್ಲಾ ನುಡಿಸುತ್ತಿದ್ದರು. ವಾಣಿ ಅವರು ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ನೌಕರಿ ಮಾಡುತ್ತಿದ್ದರು. ಅದರ ಜತೆಗೆ ಚಿಟ್ ಫಂಡ್ ನಡೆಸುತ್ತಿದ್ದರು. ಕೊರೊನಾ ಲಾಕ್ ಡೌನ್ ಆಗಿರುವುದರಿಂದ ಚಿಟ್ ಫಂಡ್ ಕಲೆಕ್ಷನ್ ಸರಿಯಾಗಿ ಆಗುತ್ತಿರಲಿಲ್ಲ. ಈ ಮಧ್ಯೆ ಹೂಡಿಕೆ ಮಾಡಿದವರಲ್ಲಿ ಕೆಲವರು ಕರೆ ಮಾಡಿ ಹಣ ಹಿಂತಿರುಗಿಸುವಂತೆ ಪೀಡಿಸುತ್ತಿದ್ದರು. ಇದರಿಂದ ನೊಂದ ವಾಣಿ ಅವರು ಬುಧವಾರ ಬೆಳಗ್ಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾದರು. ಈ ವಿಷಯ ಅರಿತ ಪತಿ ಸುರೇಶ್ ಶೆಟ್ಟಿ ಅವರು ತಕ್ಷಣ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಶಶಿ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಮಾಧ್ಯಮ ಜತೆ ಮಾತನಾಡಿದ ಪೊಲೀಸ್ ಕಮಿಷನರ್, ಬಹಳ ದುಃಖಕರ ವಿಷಯ. ಇದನ್ನು ಅವರು ಪೊಲೀಸರ ಗಮನಕ್ಕೆ ತರುತ್ತಿದ್ದರೆ, ಹಣಕ್ಕಾಗಿ ಒತ್ತಡ ಹಾಕುತ್ತಿರುವವರನ್ನು ಕರೆಸಿ ಮಾತುಕತೆ ನಡೆಸಬಹುದಿತ್ತು. ಹಣ ಮರು ಪಾವತಿಗೆ ಕಾಲಾವಕಾಶ ಕೇಳಿ ಸಮಸ್ಯೆ ಪರಿಹರಿಸಬಹುದಿತ್ತು. 

ಸಾಲ, ಇಎಂ ಐ ಕಟ್ಟಲು ಯಾರಾದರೂ ಪೀಡಿಸಿದರೆ ತಕ್ಷಣ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಎಂದು ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು