3:13 AM Saturday19 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ಕೊರೊನಾ ಲಾಕ್ ಡೌನ್ ನಿಂದ ಆರ್ಥಿಕ ಮುಗ್ಗಟ್ಟು: ಕದ್ರಿಕಂಬ್ಲ ಸಮೀಪ ದಂಪತಿ ಆತ್ಮಹತ್ಯೆಗೆ ಶರಣು

09/06/2021, 18:12

ಮಂಗಳೂರು(reporterkarnataka news): ಲಾಕ್ ಡೌನ್ ನಿಂದ ಆರ್ಥಿಕ ಸಮಸ್ಯೆಗೆ ಸಿಲುಕಿದ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಗರದ ಕದ್ರಿಕಂಬ್ಲ ಸಮೀಪದ ಪಿಂಟೋ ಲೇನ್ ನಲ್ಲಿ ನಡೆದಿದೆ.

ಸುರೇಶ್ ಶೆಟ್ಟಿ(62) ಹಾಗೂ ವಾಣಿ(57) ದಂಪತಿ ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಸುರೇಶ್  ಶೆಟ್ಟಿ ಅವರು ಪ್ರಸಿದ್ಧ ತಬ್ಲಾ ವಾದಕರು. ಆರ್ಕೇಸ್ಟ್ರಾಗಳಲ್ಲಿ ತಬ್ಲಾ ನುಡಿಸುತ್ತಿದ್ದರು. ವಾಣಿ ಅವರು ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ನೌಕರಿ ಮಾಡುತ್ತಿದ್ದರು. ಅದರ ಜತೆಗೆ ಚಿಟ್ ಫಂಡ್ ನಡೆಸುತ್ತಿದ್ದರು. ಕೊರೊನಾ ಲಾಕ್ ಡೌನ್ ಆಗಿರುವುದರಿಂದ ಚಿಟ್ ಫಂಡ್ ಕಲೆಕ್ಷನ್ ಸರಿಯಾಗಿ ಆಗುತ್ತಿರಲಿಲ್ಲ. ಈ ಮಧ್ಯೆ ಹೂಡಿಕೆ ಮಾಡಿದವರಲ್ಲಿ ಕೆಲವರು ಕರೆ ಮಾಡಿ ಹಣ ಹಿಂತಿರುಗಿಸುವಂತೆ ಪೀಡಿಸುತ್ತಿದ್ದರು. ಇದರಿಂದ ನೊಂದ ವಾಣಿ ಅವರು ಬುಧವಾರ ಬೆಳಗ್ಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾದರು. ಈ ವಿಷಯ ಅರಿತ ಪತಿ ಸುರೇಶ್ ಶೆಟ್ಟಿ ಅವರು ತಕ್ಷಣ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಶಶಿ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಮಾಧ್ಯಮ ಜತೆ ಮಾತನಾಡಿದ ಪೊಲೀಸ್ ಕಮಿಷನರ್, ಬಹಳ ದುಃಖಕರ ವಿಷಯ. ಇದನ್ನು ಅವರು ಪೊಲೀಸರ ಗಮನಕ್ಕೆ ತರುತ್ತಿದ್ದರೆ, ಹಣಕ್ಕಾಗಿ ಒತ್ತಡ ಹಾಕುತ್ತಿರುವವರನ್ನು ಕರೆಸಿ ಮಾತುಕತೆ ನಡೆಸಬಹುದಿತ್ತು. ಹಣ ಮರು ಪಾವತಿಗೆ ಕಾಲಾವಕಾಶ ಕೇಳಿ ಸಮಸ್ಯೆ ಪರಿಹರಿಸಬಹುದಿತ್ತು. 

ಸಾಲ, ಇಎಂ ಐ ಕಟ್ಟಲು ಯಾರಾದರೂ ಪೀಡಿಸಿದರೆ ತಕ್ಷಣ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಎಂದು ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು