3:24 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮೂರೂರು ಪ್ರಗತಿ ವಿದ್ಯಾಲಯದಲ್ಲಿ ದತ್ತಿನಿಧಿ, ಸಾಧನಾ ಪುರಸ್ಕಾರ

20/03/2022, 10:04

ಕಾರವಾರ(reporterkarnataka.com):

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನ ಮೂರೂರು ಪ್ರಗತಿ ವಿದ್ಯಾಲಯದಲ್ಲಿ ದತ್ತಿನಿಧಿ ಹಾಗೂ ಸಾಧನಾ ಪುರಸ್ಕಾರ ಕಾರ್ಯಕ್ರಮ ನೆರವೇರಿತು. 

ಮೂರೂರು ಪ್ರಗತಿ ವಿದ್ಯಾಲಯದ ನಿವೃತ್ತ ಮುಖ್ಯಾಧ್ಯಾಪಕ ವಿ. ಆರ್. ಭಟ್ಟ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪುಟ್ಟದಾಗಿ ಪ್ರಾರಂಭವಾದ ಸಂಸ್ಥೆ ಎತ್ತರಕ್ಕೆ ಬೆಳೆಯುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಸಂಸ್ಥೆಯ ವತಿಯಿಂದ ಇನ್ನು ಹೆಚ್ಚೆಚ್ಚು ಸಾಧಕರಿಗೆ ಪುರಸ್ಕರಿಸಿ ಗೌರವಿಸುವಂತೆ ಆಗಲಿ ಎಂದು ಶುಭ ಹಾರೈಸಿದರು. 

ಮೂರೂರು ಕಲ್ಲಬ್ಬೆ ಯ ವಿದ್ಯಾನಿಕೇತನ ಸಂಸ್ಥೆಯ ಕಾರ್ಯಾಧ್ಯಕ್ಷ ಆರ್. ಜಿ. ಭಟ್ಟ  ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ನಿಸರ್ಗದ ಮಡಿಲಲ್ಲಿ ಸಂಸ್ಕೃತಿಗೆ ಹೆಸರಾದ ಶಾಲೆಯಲ್ಲಿ ತಾವು ಸಹ ಕಲಿತಿರುವ ಘಳಿಗೆಗಳನ್ನು ನೆನೆಸಿಕೊಂಡು ಪ್ರತಿಭೆಗಳಿಗೆ ಪ್ರೋತ್ಸಾಹಿಸುವುದು ತಮ್ಮ ಆದ್ಯ ಕರ್ತವ್ಯವಾಗಿದೆ ಎಂದರು. ಕಾರ್ಯಕ್ರಮದ ಅತಿಥಿಗಳಾಗಿ  ಸಂಸ್ಥೆಯ ಉಪಾಧ್ಯಕ್ಷ  ವಿ. ಎಸ್. ಹೆಗಡೆ, ಕಾರ್ಯದರ್ಶಿ

 ಟಿ. ಎಸ್. ಭಟ್ಟ, ವಿದ್ಯಾರ್ಥಿನಿಲಯದ ಸಂಚಾಲಕ

 ಐ. ಪಿ. ಭಟ್ಟ ಉಪಸ್ಥಿತರಿದ್ದು ಮಾತನಾಡಿ ಇನ್ನಷ್ಟು ಹೆಚ್ಚೆಚ್ಚು ಪ್ರೋತ್ಸಾಹಕರು ದತ್ತಿನಿಧಿ ಹಾಗೂ ಸಾಧನಾ ಪುರಸ್ಕಾರಕ್ಕೆ ಸಿಗುವಂತಾಗಲಿ, ಸಾಧಕರಿಗೆ ಮಾರ್ಗದರ್ಶಕರಾಗಲಿ ಎಂದು ಶುಭಕೋರಿದರು. ಶಿಕ್ಷಣ ಸಮಿತಿಯ ಸಂಚಾಲಕ

 ಟಿ. ಆರ್. ಜೋಷಿ ರವರು ಪ್ರಾಸ್ತಾವಿಕವಾಗಿ ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ಅನೇಕ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನದ ರೂಪದಲ್ಲಿ ಪ್ರೋತ್ಸಾಹಿಸಿ ತುಂಬುವ ಕಾರ್ಯ ಇದಾಗಿದೆ ಎಂದರು. ಪ್ರಗತಿ ವಿದ್ಯಾಲಯ ಕನ್ನಡ ಮಾಧ್ಯಮ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ವಿಭಾಗದ ಎಲ್ಲಾ ಸಾಧಕ ವಿದ್ಯಾರ್ಥಿಗಳಿಗೆ ಪುರಸ್ಕರಿಸಲಾಯಿತು. 

ಪ್ರಗತಿ ವಿದ್ಯಾಲಯ ಆಂಗ್ಲಮಾಧ್ಯಮ ಪ್ರೌಢ ವಿಭಾಗದ ಮುಖ್ಯಾಧ್ಯಾಪಕ ವಿವೇಕ ಆಚಾರಿ, ಪ್ರಗತಿ ವಿದ್ಯಾಲಯ ಕನ್ನಡ ಮಾಧ್ಯಮ ವಿಭಾಗದ ಮುಖ್ಯಾಧ್ಯಾಪಕರ ವಿ. ಎಸ್. ಗೌಡ ಉಪಸ್ಥಿತರಿದ್ದರು. ಸಂಸ್ಥೆಯ ಸರ್ವ ಸದಸ್ಯರು, ಶಾಲಾ ಶಿಕ್ಷಕ ವೃಂದ, ಆಂಗ್ಲ ಮಾಧ್ಯಮ ಮತ್ತು ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಹಾಜರಿದ್ದರು. ಶ್ರೀಧರ ಸಂಸ್ಕೃತ ಪಾಠಶಾಲೆಯ ಮುಖ್ಯಾಧ್ಯಾಪಕ ಶ್ರೀಪಾದ್ ಭಟ್ಟ ಸ್ವಾಗತಿಸಿದರು. ಪ್ರಗತಿ ವಿದ್ಯಾಲಯ ಪ್ರಾಥಮಿಕ ವಿಭಾಗದ ಮುಖ್ಯಾಧ್ಯಾಪಕಿ ನಾಗವೇಣಿ ಭಟ್ಟ

ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು