7:27 AM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ವಾಯುಭಾರ ಕುಸಿತ: ರಾಜ್ಯದ ಹಲವೆಡೆ ಭಾರಿ ಮಳೆ; ಇಬ್ಬರ ಸಾವು, ವಿದ್ಯುತ್ ಸಂಪರ್ಕ ಅಸ್ತವ್ಯಸ್ತ

20/03/2022, 15:19

ಬೆಂಗಳೂರು(reporterkarnataka.com):  ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿದ ಪರಿಣಾಮ ರಾಜ್ಯದ ವಿವಿಧೆಡೆ ಶನಿವಾರ ಧಾರಾಕಾರವಾಗಿ ಮಳೆಯಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ.

ಚಿಕ್ಕಮಗಳೂರು ತಾಲ್ಲೂಕಿನ ಕೆಲವೆಡೆ ಆಲಿಕಲ್ಲು ಸಮೇತ ಮಳೆ ಸುರಿದಿದೆ. ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲ್ಲೂಕಿನ ಹನಸೋಗೆ ಗ್ರಾಮದ ರೈತ ಸಿದ್ದಲಿಂಗನಾಯಕ (72) ಅವರು ಜಮೀನಿನ ಬಳಿ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಬಿರುಗಾಳಿ ಸಹಿತ ಮಳೆಗೆ ಮರದ ರೆಂಬೆ ಬಿದ್ದು ಮಲ್ಲಮ್ಮ (53) ಅಸುನೀಗಿದ್ದಾರೆ.

ವಿವಿಧ ಗ್ರಾಮಗಳಲ್ಲಿ ಮನೆಗಳ ಚಾವಣಿ, ಹೆಂಚುಗಳು ಹಾನಿಗೊಂಡಿವೆ. ವಿದ್ಯುತ್‌ ಸಂಪರ್ಕ ಅಸ್ತವ್ಯಸ್ತಗೊಂಡಿದೆ. ಹೊಳೆನರಸೀಪುರ ತಾಲ್ಲೂಕಿನ ಹೊಸಹಳ್ಳಿಯಲ್ಲಿ ಸಿಡಿಲು ಬಡಿದು ಟ್ರಾಕ್ಟರ್ ಮಂಜು ಅವರ ಎತ್ತು ಮೃತಪಟ್ಟಿದೆ. ಉತ್ತರ ಕರ್ನಾಟಕದ ಕೆಲವೆಡೆಯೂ ಗುಡುಗು, ಸಿಡಿಲಿನಿಂದ ಮಳೆ ಸುರಿದಿದೆ.

ಹಾವೇರಿ ಜಿಲ್ಲೆಯ ಅರಳೇಶ್ವರ ಗ್ರಾಮ ಸೇರಿದಂತೆ ಕೆಲವೆಡೆ ಭಾರೀ ಮಳೆ ಸುರಿದಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದು ಜನರು ಸಂತಸಗೊಂಡಿದ್ದಾರೆ.

ಶಿರಸಿಯಲ್ಲೂ ಸುರಿದ ಭಾರೀ ಮಳೆ ಗಾಳಿಗೆ ಮಾರಿಕಾಂಬ ಗದ್ದುಗೆಯ ಚಪ್ಪರ ಕುಸಿತಗೊಂಡಿದೆ. ಜಾತ್ರಾ ಪೇಟೆಯ ಅಂಗಡಿಗಳಲ್ಲಿ ಮಾರಾಟಕ್ಕಿಟ್ಟ ಆಟಿಗೆ ವಸ್ತುಗೆಳೆಲ್ಲಾ ಹಾಳಾಗಿ, ವ್ಯಾಪಾರಿಗಳಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆರಾಯ ಅಬ್ಬರಿಸಿದ್ದಾನೆ. ಗಾಳಿ-ಮಳೆಗೆ ಕಬ್ಬಿಣದ ಶೀಟ್​ಗಳು ಹಾರಿ ಹೋಗಿವೆ. ಶೃಂಗೇರಿ, ಕಳಸ ತಾಲೂಕಿನಲ್ಲಿ ಧಾರಾಕಾರ ಮಳೆ ಆಗಿದ್ದು, ವರ್ಷದ ಮೊದಲ ಮಳೆಯ ಅಬ್ಬರ ಕಂಡು ಮಲೆನಾಡಿಗರು ಕಂಗಾಲಾಗಿದ್ದಾರೆ. ಕೊಡಗಿನ ಸುತ್ತಮುತ್ತ ಭಾರೀ ಮಳೆ ಸುರಿದಿದೆ. ಸುಂಟಿಕೊಪ್ಪ ನಾಪೋಕ್ಲು ವಿರಾಜಪೇಟೆಯಲ್ಲಿ ವರುಣನ ಆರ್ಭಟಕ್ಕೆ ಜನರು ತತ್ತರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು