1:35 PM Monday15 - June 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ…

ಇತ್ತೀಚಿನ ಸುದ್ದಿ

ವಾಯುಭಾರ ಕುಸಿತ: ರಾಜ್ಯದ ಹಲವೆಡೆ ಭಾರಿ ಮಳೆ; ಇಬ್ಬರ ಸಾವು, ವಿದ್ಯುತ್ ಸಂಪರ್ಕ ಅಸ್ತವ್ಯಸ್ತ

20/03/2022, 15:19

ಬೆಂಗಳೂರು(reporterkarnataka.com):  ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿದ ಪರಿಣಾಮ ರಾಜ್ಯದ ವಿವಿಧೆಡೆ ಶನಿವಾರ ಧಾರಾಕಾರವಾಗಿ ಮಳೆಯಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ.

ಚಿಕ್ಕಮಗಳೂರು ತಾಲ್ಲೂಕಿನ ಕೆಲವೆಡೆ ಆಲಿಕಲ್ಲು ಸಮೇತ ಮಳೆ ಸುರಿದಿದೆ. ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲ್ಲೂಕಿನ ಹನಸೋಗೆ ಗ್ರಾಮದ ರೈತ ಸಿದ್ದಲಿಂಗನಾಯಕ (72) ಅವರು ಜಮೀನಿನ ಬಳಿ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಬಿರುಗಾಳಿ ಸಹಿತ ಮಳೆಗೆ ಮರದ ರೆಂಬೆ ಬಿದ್ದು ಮಲ್ಲಮ್ಮ (53) ಅಸುನೀಗಿದ್ದಾರೆ.

ವಿವಿಧ ಗ್ರಾಮಗಳಲ್ಲಿ ಮನೆಗಳ ಚಾವಣಿ, ಹೆಂಚುಗಳು ಹಾನಿಗೊಂಡಿವೆ. ವಿದ್ಯುತ್‌ ಸಂಪರ್ಕ ಅಸ್ತವ್ಯಸ್ತಗೊಂಡಿದೆ. ಹೊಳೆನರಸೀಪುರ ತಾಲ್ಲೂಕಿನ ಹೊಸಹಳ್ಳಿಯಲ್ಲಿ ಸಿಡಿಲು ಬಡಿದು ಟ್ರಾಕ್ಟರ್ ಮಂಜು ಅವರ ಎತ್ತು ಮೃತಪಟ್ಟಿದೆ. ಉತ್ತರ ಕರ್ನಾಟಕದ ಕೆಲವೆಡೆಯೂ ಗುಡುಗು, ಸಿಡಿಲಿನಿಂದ ಮಳೆ ಸುರಿದಿದೆ.

ಹಾವೇರಿ ಜಿಲ್ಲೆಯ ಅರಳೇಶ್ವರ ಗ್ರಾಮ ಸೇರಿದಂತೆ ಕೆಲವೆಡೆ ಭಾರೀ ಮಳೆ ಸುರಿದಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದು ಜನರು ಸಂತಸಗೊಂಡಿದ್ದಾರೆ.

ಶಿರಸಿಯಲ್ಲೂ ಸುರಿದ ಭಾರೀ ಮಳೆ ಗಾಳಿಗೆ ಮಾರಿಕಾಂಬ ಗದ್ದುಗೆಯ ಚಪ್ಪರ ಕುಸಿತಗೊಂಡಿದೆ. ಜಾತ್ರಾ ಪೇಟೆಯ ಅಂಗಡಿಗಳಲ್ಲಿ ಮಾರಾಟಕ್ಕಿಟ್ಟ ಆಟಿಗೆ ವಸ್ತುಗೆಳೆಲ್ಲಾ ಹಾಳಾಗಿ, ವ್ಯಾಪಾರಿಗಳಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆರಾಯ ಅಬ್ಬರಿಸಿದ್ದಾನೆ. ಗಾಳಿ-ಮಳೆಗೆ ಕಬ್ಬಿಣದ ಶೀಟ್​ಗಳು ಹಾರಿ ಹೋಗಿವೆ. ಶೃಂಗೇರಿ, ಕಳಸ ತಾಲೂಕಿನಲ್ಲಿ ಧಾರಾಕಾರ ಮಳೆ ಆಗಿದ್ದು, ವರ್ಷದ ಮೊದಲ ಮಳೆಯ ಅಬ್ಬರ ಕಂಡು ಮಲೆನಾಡಿಗರು ಕಂಗಾಲಾಗಿದ್ದಾರೆ. ಕೊಡಗಿನ ಸುತ್ತಮುತ್ತ ಭಾರೀ ಮಳೆ ಸುರಿದಿದೆ. ಸುಂಟಿಕೊಪ್ಪ ನಾಪೋಕ್ಲು ವಿರಾಜಪೇಟೆಯಲ್ಲಿ ವರುಣನ ಆರ್ಭಟಕ್ಕೆ ಜನರು ತತ್ತರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು