8:45 PM Sunday19 - April 2026
ಬ್ರೇಕಿಂಗ್ ನ್ಯೂಸ್
ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು Udupi | ಕಾಪು ಬಳಿ ಭೀಕರ ಲಾರಿ-ಕಾರು ಅಪಘಾತ: ಓರ್ವ ಸಾವು; ಇಬ್ಬರು… ಮಂತ್ರಾಲಯದ ಬಳಿ ಭೀಕರ ಅಪಘಾತ: 8 ಮಂದಿ ಸಾವು, ತರೀಕೆರೆ ತಾಲೂಕಿನ ಇಬ್ಬರು…

ಇತ್ತೀಚಿನ ಸುದ್ದಿ

ಅವಕಾಶಗಳ ಸದುಪಯೋಗದಿಂದ ಜೀವನದ ಯಶಸ್ಸು ನಮ್ಮದಾಗಲು ಸಾಧ್ಯ: ಉಪನ್ಯಾಸಕ ವಿಶ್ವನಾಥ ರೈ

20/03/2022, 23:59

ನೆಲ್ಯಾಡಿ(reporterkarnataka.com) : ಅವಕಾಶಗಳ ಸದುಪಯೋಗದಿಂದ ಜೀವನದ ಯಶಸ್ಸು ನಮ್ಮದಾಗಬೇಕು ಎಂದು ಕೊಕ್ಕಡ ಸರಕಾರಿ ಪಿಯು ಕಾಲೇಜಿನ ಉಪನ್ಯಾಸಕ ವಿಶ್ವನಾಥ ರೈ ಹೇಳಿದರು.

ನೆಲ್ಯಾಡಿ ಬೆಥನಿ ಕೈಗಾರಿಕಾ ತರಬೇತಿ ಸಂಸ್ಥೆ ಜ್ಞಾನೋದಯ ಬೆಥನಿ ಪದವಿಪೂರ್ವ ಕಾಲೇಜಿನ ಸಿಲ್ವರ್ ಜೂಬಿಲಿ ಸಭಾಂಗಣದಲ್ಲಿ ನಡೆಸಿದ ಆನ್ಲೈನ್ ಜಾನಪದ ಗೀತ ಗಾಯನ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ನಿರ್ಧೇಶಕರಾದ ರೆ|ಫಾ| ಸತ್ಯನ್ ತೋಮಸ್ ಮಾತನಾಡಿ, ವಿದ್ಯಾರ್ಥಿಗಳು ಜೀವನದ ಕಷ್ಟಗಳನ್ನು ಎದುರಿಸಿ ಯಶಸ್ಸು ಕಾಣಲಿ ಎಂದು ಶುಭ ಹಾರೈಸಿದರು.  

ವೇದಿಕೆಯಲ್ಲಿ ಜ್ಞಾನೋದಯ ಬೆಥನಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರೆ|ಫಾ| ತೋಮಸ್ ಬಿಜಿಲಿ ಒ.ಐ.ಸಿ,, ಸಂಸ್ಥೆಯ ಪ್ರಾಂಶುಪಾಲರಾದ ಸಜಿ.ಕೆ.ತೋಮಸ್, ತರಬೇತಿ ಅಧಿಕಾರಿ ಜೋನ್ ಪಿ.ಎಸ್. ಉಪಸ್ಥಿತರಿದ್ದು ಶುಭ ಹಾರೈಸಿದರು. ಕಿರಿಯ ತರಬೇತಿ ಅಧಿಕಾರಿ ಸುಬ್ರಾಯ ನಾಯಕ್ ಸ್ವಾಗತಿಸಿದರು. ತರಬೇತಿ ಅಧಿಕಾರಿ ಜೋನ್ ಪಿ.ಎಸ್. ವಂದಿಸಿದರು. ಕಿರಿಯ ತರಬೇತಿ ಅಧಿಕಾರಿ ಹರಿಪ್ರಸಾದ್ ರೈ ಬಿ ಕಾರ್ಯಕ್ರಮ ನಿರೂಪಿಸಿದರು. 

ಆನ್ಲೈನ್ ಜಾನಪದ ಗೀತ ಗಾಯನ ಸ್ಪರ್ಧೆಯಲ್ಲಿ ಜ್ಞಾನೋದಯ ಬೆಥನಿ ಪ್ರೌಢಶಾಲಾ ವಿದ್ಯಾರ್ಥಿಗಳು ಪ್ರಥಮ ಹಾಗೂ ಬಿಷಪ್ ಪೋಳಿಕಾರ್ಪಸ್ ಪಬ್ಳಿಕ್ ಸ್ಕೂಲ್  ಉದನೆ ದ್ವಿತೀಯ ಸ್ಥಾನ ಪಡೆದುಕೊಂಡು ನಗದು ಬಹುಮಾನ ಹಾಗೂ ಪ್ರಶಸ್ತಿಪತ್ರ ತಮ್ಮದಾಗಿಸಿಕೊಂಡರು. ಸ್ಪರ್ಧೆಯಲ್ಲಿ ಒಟ್ಟು 13 ಶಾಲೆಗಳು ಭಾಗವಹಿಸಿದ್ದು ಎಲ್ಲಾ ತಂಡಗಳಿಗೂ ಭಾಗವಹಿಸುವಿಕೆಯ ಪ್ರಮಾಣಪತ್ರ ನೀಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು