10:00 PM Wednesday22 - October 2025
ಬ್ರೇಕಿಂಗ್ ನ್ಯೂಸ್
ಪುತ್ತೂರು: ಅಕ್ರಮ ಜಾನುವಾರು ಸಾಗಾಟ; ಆರೋಪಿ ಕಾಲಿಗೆ ಪೊಲೀಸರು ಗುಂಡೇಟು; ಓರ್ವನ ಸೆರೆ,… ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ 95 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ… ಕಾರ್ಮಿಕ ಅಧಿಕಾರಿ ಸೋಗಿನಲ್ಲಿ ವಸೂಲಿಗೆ ಯತ್ನ: ಸಾರ್ವಜನಿಕರು ಎಚ್ಚರದಿಂದಿರಲು ಇಲಾಖಾ ಅಧಿಕಾರಿಗಳ ಮನವಿ Mysore | ಎಚ್. ಡಿ. ಕೋಟೆಯಲ್ಲಿ ಹುಲಿ ದಾಳಿ: ಎರಡೂ ಕಣ್ಣು ಕಳೆದುಕೊಂಡ… ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಹಿತ 5… Kodagu | ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಸಾಕ್ಷಿಯಾಗಲಿರುವ ಡಿಸಿಎಂ, ಸಚಿವರು, ಶಾಸಕರು ವಿರಾಜಪೇಟೆಯ ಪೆರಂಬಾಡಿ ಬಳಿ ಉದ್ಯಮಿ ಮೇಲೆ ಹಲ್ಲೆ, ದರೋಡೆ: ಪೊಲೀಸರು ಹೈ ಅಲರ್ಟ್ ಹಾಡು ನಿಲ್ಲಿಸಿದ ಯಕ್ಷ ಕೋಗಿಲೆ: ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ Kodagu | ತುಲಾ ಸಂಕ್ರಮಣ: ತಲಕಾವೇರಿಗೆ ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ಆಭರಣ

ಇತ್ತೀಚಿನ ಸುದ್ದಿ

ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆಗೆ ವಿರೋಧವಿಲ್ಲ: ಕಾಂಗ್ರೆಸ್ ಉಪ ನಾಯಕ ಯು.ಟಿ.ಖಾದರ್

21/03/2022, 00:07

ಬೆಂಗಳೂರು(reporterkarnataka.com):

ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆ ವಿಚಾರಕ್ಕೆ ನಮ್ಮ ವಿರೋಧವಿಲ್ಲ, ಎಲ್ಲಾ ಧರ್ಮಗಳನ್ನೂ ನಾವು ಸಮಾನವಾಗಿ ಗೌರವಿಸುತ್ತೇವೆ ಎಂದು ಮಾಜಿ ಸಚಿವ ಯುಟಿ.ಖಾದರ್ ಹೇಳಿದ್ದಾರೆ.

ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಖಾದರ್‌, ಭಗವದ್ಗೀತೆಯ ಮೌಲ್ಯಗಳು ಜನರ ಹೃದಯ ಸ್ವಚ್ಛಗೊಳಿಸುತ್ತದೆ. ಅದರಂತೆ ಕುರಾನ್, ಬೈಬಲ್ ಸೇರಿದಂತೆ ಎಲ್ಲ ಧರ್ಮದವರ ಗ್ರಂಥಗಳ ಬಗ್ಗೆ ಮಕ್ಕಳಿಗೆ ಪರಿಚಯವಾಗಲಿ ಎಂಬುದು ನಮ್ಮ ಒತ್ತಾಯ. ಮಹಾನ್ ವ್ಯಕ್ತಿಗಳಾದ ಶ್ರಿ ಬಸವಣ್ಣನವರ ಸಾಹಿತ್ಯ, ವಚನಗಳು, ಗ್ರಂಥಗಳ ಬಗ್ಗೆ ಹಾಗೂ ಕೋಟೆ ಚೆನ್ನಯ್ಯ ಅವರ ವ್ಯಕ್ತಿತ್ವವೂ ಮಕ್ಕಳಿಗೆ ಪರಿಚಯವಾಗಲಿ. ಆದರೆ ಯುವಜನರು, ವಿದ್ಯಾರ್ಥಿಗಳಲ್ಲಿ ಕೋಮುಭಾವನೆ ಬೆಳೆಯದಂತೆ ಎಚ್ಚರ ವಹಿಸಬೇಕು ಎಂದರು.

ಹಿಜಾಬ್ ವಿಚಾರವನ್ನು ಅನಗತ್ಯವಾಗಿ ಚರ್ಚೆಗೆಳೆದು ತರಲಾಗಿದೆ. ಉಡುಪಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಒಟ್ಟು 83 ವಿದ್ಯಾರ್ಥಿಗಳಲ್ಲಿ 6 ವಿದ್ಯಾರ್ಥಿಗಳು ಮಾತ್ರವೇ ಹಿಜಾಬ್ ಗೆ ಒತ್ತಾಯಿಸಿದ್ದರು. ಕೆಲವರು ಅದನ್ನೇ ದೊಡ್ಡ ರಾದ್ದಾಂತ ಮಾಡಿದರು. ಮಕ್ಕಳಲ್ಲಿನ ಕೋಮು ಸೌಹಾರ್ದಕ್ಕೆ ದಕ್ಕೆಯುಂಟುಮಾಡಬಾರದು. ಈ ರೀತಿ ಮಾಡಿದರೆ ಮಕ್ಕಳ‌ ಹಾಗೂ ದೇಶದ ಭವಿಷ್ಯಕ್ಕೆ ಮಾರಕವಾಗಲಿದೆ ಎಂದರು. ಬಳ್ಳಾರಿ ನಗರದ ಮಹಾ ಜನತೆ ಆರ್ಶಿವಾದದಿಂದ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ದೊರೆತಿದ್ದು, ಪಾಲಿಕೆ ಚುಕ್ಕಾಣಿ ಹಿಡಿದಿದೆ. ಮೇಯರ್ ಆಗಿ ರಾಜೇಶ್ವರಿ ಸುಬ್ಬರಾಯಡು ಹಾಗೂ ಉಪ‌ಮೇಯರ್ ಮಾಲಾನ್ ಬೀ ಅವರು ಆಯ್ಕೆಯಾಗಿದ್ದು, ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುವೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಮಹ್ಮದ್ ರಫೀಕ್, ಚುನಾವಣಾ ವೀಕ್ಷಕರಾದ ಚಂದ್ರಪ್ಪ, ಮಂಜುನಾಥ್ ಮತ್ತಿತರರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು