12:09 PM Wednesday25 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

ರಷ್ಯಾ- ಉಕ್ರೇನ್ ಸಂಘರ್ಷ: ಕ್ಷಿಪಣಿ ದಾಳಿಗೆ ಮೃತಪಟ್ಟ ನವೀನ್ ಪಾರ್ಥಿವ ಶರೀರ ಹಾವೇರಿಗೆ; 20 ದಿನಗಳ ಬಳಿಕ ರವಾನೆ!

21/03/2022, 15:40

ಬೆಂಗಳೂರು(reporterkarnataka.com): ಉಕ್ರೇನ್‌ನಲ್ಲಿ ಕ್ಷಿಪಣಿ ದಾಳಿಯಲ್ಲಿ ಮೃತಪಟ್ಟಿರುವ ಹಾವೇರಿಯ ನವೀನ್‌ ಗ್ಯಾನಗೌಡರ ಮೃತದೇಹ ಇಂದು ನಸುಕಿನಲ್ಲಿ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಾರ್ಥಿವ ಶರೀರವನ್ನು ಹಾಗೂ ಸಂಬಂಧಿಸಿದ ದಾಖಲೆಗಳನ್ನು ನವೀನ್ ಅವರ ಕುಟುಂಬಸ್ಥರಿಗೆ ಹಸ್ತಾಂತರಿಸಿದರು.

ಕೇಂದ್ರ ಸರ್ಕಾರದ ಆಪರೇಷನ್‌ ಗಂಗಾ ಕಾರ್ಯಾಚರಣೆಯ ಮೂಲಕ ಕರ್ನಾಟಕದ 572 ವಿದ್ಯಾರ್ಥಿಗಳನ್ನು ರಾಜ್ಯಕ್ಕೆ ಕರೆತರಲಾಗಿದೆ. ನವೀನ್‌ ಮೃತದೇಹ ಇರಿಸಲಾಗಿದ್ದ ಶವಾಗಾರದ ಸಮೀಪದಲ್ಲೇ ದಾಳಿ ನಡೆದಿದ್ದರಿಂದ ಮೃತದೇಹ ತರುವ ಕಾರ್ಯಾಚರಣೆಗೆ ಅಡ್ಡಿಯಾಗಿತ್ತು ಎಂದುಕೊಂಡ ಮುಖ್ಯಮಂತ್ರಿ ಬೊಮ್ಮಾಯಿ ಈ ಸಂದರ್ಭದಲ್ಲಿ ಮಾಧ್ಯಮಕ್ಕೆ ತಿಳಿಸಿದರು.

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸೋಮವಾರ ನಸುಕಿನಲ್ಲಿ ಮೃತದೇಹ ತರಲಾಗಿದೆ. ದುಬೈನಿಂದ ಎಮಿರೇಟ್ಸ್ ಇಕೆ 568 ವಿಮಾನದಲ್ಲಿ ಪಾರ್ಥಿವ ಶರೀರವನ್ನು ರವಾನಿಸಲಾಗಿತ್ತು.

ನಂತರ ಆಂಬುಲೆನ್ಸ್‌ನಲ್ಲಿ ಮೃತದೇಹವನ್ನು ಹಾವೇರಿ ಜಿಲ್ಲೆಯ ಚಳಗೇರಿ ಗ್ರಾಮಕ್ಕೆ ಕೊಂಡೊಯ್ಯಲಾಯಿತು.  

ನವೀನ್‌ ಪಾರ್ಥಿವ ಶರೀರಕ್ಕೆ ವೀರಶೈವ ಪದ್ಧತಿ ಪ್ರಕಾರ ಪೂಜಾ ಕಾರ್ಯ ನೆರವೇರಿಸಲಾಗುತ್ತದೆ. ಸಂಜೆವರೆಗೂ ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು. ನಂತರ ದಾವಣಗೆರೆಯ ಎಸ್‌.ಎಸ್‌. ಆಸ್ಪತ್ರೆಗೆ ಮಗನ ಮೃತದೇಹವನ್ನು ದಾನ ಮಾಡುತ್ತೇವೆ’ ಎಂದು ಮೃತ ನವೀನ ಗ್ಯಾನಗೌಡರ ತಂದೆ ಶೇಖರಪ್ಪ ಗ್ಯಾನಗೌಡರ ಈ ಹಿಂದೆ ತಿಳಿಸಿದ್ದರು.

ಮಾರ್ಚ್ 1 ರಂದು ಉಕ್ರೇನ್‌ನ ಹಾರ್ಕಿವ್‌ನಲ್ಲಿ ರಷ್ಯಾ ಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ ನವೀನ್‌ ಮೃತಪಟ್ಟಿದ್ದರು. ಮೃತ ಯುವಕ ನಾಲ್ಕನೇ ವರ್ಷದ ವೈದ್ಯಕೀಯ ಕೋರ್ಸ್‌ ಓದುತ್ತಿದ್ದರು. ಒಂದು ವಾರ ಕಾಲ ಬಂಕರ್‌ನಲ್ಲಿ ಇದ್ದ ಅವರು ಹೊರಗೆ ಬಂದಾಗ ಕ್ಷಿಪಣಿ ದಾಳಿಗೆ ಸಿಲುಕಿ ಮೃತಪಟ್ಟಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು