6:27 PM Saturday7 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ರಷ್ಯಾ- ಉಕ್ರೇನ್ ಸಂಘರ್ಷ: ಕ್ಷಿಪಣಿ ದಾಳಿಗೆ ಮೃತಪಟ್ಟ ನವೀನ್ ಪಾರ್ಥಿವ ಶರೀರ ಹಾವೇರಿಗೆ; 20 ದಿನಗಳ ಬಳಿಕ ರವಾನೆ!

21/03/2022, 15:40

ಬೆಂಗಳೂರು(reporterkarnataka.com): ಉಕ್ರೇನ್‌ನಲ್ಲಿ ಕ್ಷಿಪಣಿ ದಾಳಿಯಲ್ಲಿ ಮೃತಪಟ್ಟಿರುವ ಹಾವೇರಿಯ ನವೀನ್‌ ಗ್ಯಾನಗೌಡರ ಮೃತದೇಹ ಇಂದು ನಸುಕಿನಲ್ಲಿ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಾರ್ಥಿವ ಶರೀರವನ್ನು ಹಾಗೂ ಸಂಬಂಧಿಸಿದ ದಾಖಲೆಗಳನ್ನು ನವೀನ್ ಅವರ ಕುಟುಂಬಸ್ಥರಿಗೆ ಹಸ್ತಾಂತರಿಸಿದರು.

ಕೇಂದ್ರ ಸರ್ಕಾರದ ಆಪರೇಷನ್‌ ಗಂಗಾ ಕಾರ್ಯಾಚರಣೆಯ ಮೂಲಕ ಕರ್ನಾಟಕದ 572 ವಿದ್ಯಾರ್ಥಿಗಳನ್ನು ರಾಜ್ಯಕ್ಕೆ ಕರೆತರಲಾಗಿದೆ. ನವೀನ್‌ ಮೃತದೇಹ ಇರಿಸಲಾಗಿದ್ದ ಶವಾಗಾರದ ಸಮೀಪದಲ್ಲೇ ದಾಳಿ ನಡೆದಿದ್ದರಿಂದ ಮೃತದೇಹ ತರುವ ಕಾರ್ಯಾಚರಣೆಗೆ ಅಡ್ಡಿಯಾಗಿತ್ತು ಎಂದುಕೊಂಡ ಮುಖ್ಯಮಂತ್ರಿ ಬೊಮ್ಮಾಯಿ ಈ ಸಂದರ್ಭದಲ್ಲಿ ಮಾಧ್ಯಮಕ್ಕೆ ತಿಳಿಸಿದರು.

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸೋಮವಾರ ನಸುಕಿನಲ್ಲಿ ಮೃತದೇಹ ತರಲಾಗಿದೆ. ದುಬೈನಿಂದ ಎಮಿರೇಟ್ಸ್ ಇಕೆ 568 ವಿಮಾನದಲ್ಲಿ ಪಾರ್ಥಿವ ಶರೀರವನ್ನು ರವಾನಿಸಲಾಗಿತ್ತು.

ನಂತರ ಆಂಬುಲೆನ್ಸ್‌ನಲ್ಲಿ ಮೃತದೇಹವನ್ನು ಹಾವೇರಿ ಜಿಲ್ಲೆಯ ಚಳಗೇರಿ ಗ್ರಾಮಕ್ಕೆ ಕೊಂಡೊಯ್ಯಲಾಯಿತು.  

ನವೀನ್‌ ಪಾರ್ಥಿವ ಶರೀರಕ್ಕೆ ವೀರಶೈವ ಪದ್ಧತಿ ಪ್ರಕಾರ ಪೂಜಾ ಕಾರ್ಯ ನೆರವೇರಿಸಲಾಗುತ್ತದೆ. ಸಂಜೆವರೆಗೂ ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು. ನಂತರ ದಾವಣಗೆರೆಯ ಎಸ್‌.ಎಸ್‌. ಆಸ್ಪತ್ರೆಗೆ ಮಗನ ಮೃತದೇಹವನ್ನು ದಾನ ಮಾಡುತ್ತೇವೆ’ ಎಂದು ಮೃತ ನವೀನ ಗ್ಯಾನಗೌಡರ ತಂದೆ ಶೇಖರಪ್ಪ ಗ್ಯಾನಗೌಡರ ಈ ಹಿಂದೆ ತಿಳಿಸಿದ್ದರು.

ಮಾರ್ಚ್ 1 ರಂದು ಉಕ್ರೇನ್‌ನ ಹಾರ್ಕಿವ್‌ನಲ್ಲಿ ರಷ್ಯಾ ಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ ನವೀನ್‌ ಮೃತಪಟ್ಟಿದ್ದರು. ಮೃತ ಯುವಕ ನಾಲ್ಕನೇ ವರ್ಷದ ವೈದ್ಯಕೀಯ ಕೋರ್ಸ್‌ ಓದುತ್ತಿದ್ದರು. ಒಂದು ವಾರ ಕಾಲ ಬಂಕರ್‌ನಲ್ಲಿ ಇದ್ದ ಅವರು ಹೊರಗೆ ಬಂದಾಗ ಕ್ಷಿಪಣಿ ದಾಳಿಗೆ ಸಿಲುಕಿ ಮೃತಪಟ್ಟಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು