5:55 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಕಾಶ್ಮೀರದಲ್ಲಿ ಸಿದ್ದರಾಮಯ್ಯರಿಗೂ ಬದುಕಲು ಸಾಧ್ಯವಾಗುತ್ತಿರಲಿಲ್ಲ: ಸಿ.ಟಿ. ರವಿ

21/03/2022, 17:07

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ಕಾಶ್ಮೀರದಲ್ಲಿ ಮಾಜಿ ಮುಖ್ಯಮಂತ್ರಿಸಿದ್ದರಾಮಯ್ಯ ಮತ್ತು ಅವರ ಮಕ್ಕಳು, ಮೊಮ್ಮೊಕ್ಕಳು ಉಳಿಯುತ್ತಿರಲಿಲ್ಲ. ಅಲ್ಲಿ ಅವರು ಉಳಿಯಬೇಕಾದರೆ ಸಿದ್ರಾಮುಲ್ಲಾ ಖಾನ್ ಆಗಿದ್ರೆ ಮಾತ್ರ ಉಳಿದುಕೊಳ್ಳೋರು ಎಂದು ಚಿಕ್ಕಮಗಳೂರಿನಲ್ಲಿ ಸಿದ್ದು ವಿರುದ್ಧ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಸಿ.ಟಿ.ರವಿ ವ್ಯಂಗ್ಯವಾಡಿದರು ಕಾಶ್ಮೀರಿ ಫೈಲ್ಸ್ ವಾಸ್ತವಿಕ ಸತ್ಯದ ಘಟನೆಗಳ ಚಿತ್ರ. 

ಸಿದ್ದರಾಮಯ್ಯ ಅವರು ವಕೀಲರಿದ್ದಾರೆ, ಬುದ್ಧಿವಂತರಿದ್ದಾರೆ ಆಯಾ ಕಾಲಘಟ್ಟದ ಸರ್ಕಾರಿ ದಾಖಲೆಗಳಿವೆ. ಸಿದ್ದರಾಮಯ್ಯನವರಿಗೆ ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ ಎಂದರು.

ಬಾಮಿಯಾನ್‍ನಲ್ಲಿ ಬುದ್ದ ನಗುತ್ತಾ ನಿಂತಿದ್ದ, ಅವನನ್ನ ತಾಲಿಬಾನ್‍ಗಳು ಫಿರಂಗಿ ಇಟ್ಟು ಉಡಾಯಿಸಿದರು. ಬುದ್ಧನಿಗಿಂತ ಶಾಂತಿ ಸಂದೇಶ ಸಾರಿದ ಮತ್ತೋಬ್ಬ ವ್ಯಕ್ತಿ ಬೇಕಾ? ಅದೇ ಜನ ಕಾಶ್ಮೀರಿ ಪಂಡಿತರು, ಹಿಂದೂಗಳ ಕಾಶ್ಮೀರ ಕಣಿವೆ ತೊರೆಯಬೇಕೆಂದು ಮೈಕ್‍ನಲ್ಲಿ ಕೂಗಿದರು.

ಅದೇ ಜನರು ಭಯ ಹುಟ್ಟಿಸಲು ಕೊಂದರು, ಗರಗಸದಲ್ಲಿ ಕೊಯ್ದರು. ಸಾಕ್ಷಿ ಬೇಕು ಅಂದ್ರೆ ಸಾವಿರ ಸಾಕ್ಷಿಗಳು ಸಿಗುತ್ತವೆ ಎಂದು ಅವರು ನುಡಿದರು.

ಆ ಕಾಶ್ಮೀರಿ ಪಂಡಿತರ ಕುಟುಂಬದವರು ಇನ್ನೂ ಬದುಕಿದ್ದಾರೆ, ನಿರಾಶ್ರಿತರಾಗಿದ್ದಾರೆ. ಎಲ್ಲದರಲ್ಲೂ ರಾಜಕೀಯ ಹುಡುಕುವ ಪೂರ್ವಾಗ್ರಹ ಮನಸ್ಥಿತಿಗೆ ಅರ್ಥವಾಗಲ್ಲ. ಅರ್ಥ ಮಾಡಿಕೊಳ್ಳುವ ಮನಸ್ಥಿತಿ ಇದ್ದರೆ ನೋಡಿ ಸತ್ಯದ ವಿವೇಚನೆಗೆ ಒಳಗಾಗೋರು 

ಅವರಿಗೆ ಸತ್ಯವನ್ನೋ ನೋಡಿ ಒಪ್ಪಿಕೊಳ್ಳುವ ಮನಸ್ಸು-ಮನಸ್ಥಿತಿ ಇಲ್ಲ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು