1:44 PM Wednesday25 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

ಕಾಶ್ಮೀರದಲ್ಲಿ ಸಿದ್ದರಾಮಯ್ಯರಿಗೂ ಬದುಕಲು ಸಾಧ್ಯವಾಗುತ್ತಿರಲಿಲ್ಲ: ಸಿ.ಟಿ. ರವಿ

21/03/2022, 17:07

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ಕಾಶ್ಮೀರದಲ್ಲಿ ಮಾಜಿ ಮುಖ್ಯಮಂತ್ರಿಸಿದ್ದರಾಮಯ್ಯ ಮತ್ತು ಅವರ ಮಕ್ಕಳು, ಮೊಮ್ಮೊಕ್ಕಳು ಉಳಿಯುತ್ತಿರಲಿಲ್ಲ. ಅಲ್ಲಿ ಅವರು ಉಳಿಯಬೇಕಾದರೆ ಸಿದ್ರಾಮುಲ್ಲಾ ಖಾನ್ ಆಗಿದ್ರೆ ಮಾತ್ರ ಉಳಿದುಕೊಳ್ಳೋರು ಎಂದು ಚಿಕ್ಕಮಗಳೂರಿನಲ್ಲಿ ಸಿದ್ದು ವಿರುದ್ಧ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಸಿ.ಟಿ.ರವಿ ವ್ಯಂಗ್ಯವಾಡಿದರು ಕಾಶ್ಮೀರಿ ಫೈಲ್ಸ್ ವಾಸ್ತವಿಕ ಸತ್ಯದ ಘಟನೆಗಳ ಚಿತ್ರ. 

ಸಿದ್ದರಾಮಯ್ಯ ಅವರು ವಕೀಲರಿದ್ದಾರೆ, ಬುದ್ಧಿವಂತರಿದ್ದಾರೆ ಆಯಾ ಕಾಲಘಟ್ಟದ ಸರ್ಕಾರಿ ದಾಖಲೆಗಳಿವೆ. ಸಿದ್ದರಾಮಯ್ಯನವರಿಗೆ ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ ಎಂದರು.

ಬಾಮಿಯಾನ್‍ನಲ್ಲಿ ಬುದ್ದ ನಗುತ್ತಾ ನಿಂತಿದ್ದ, ಅವನನ್ನ ತಾಲಿಬಾನ್‍ಗಳು ಫಿರಂಗಿ ಇಟ್ಟು ಉಡಾಯಿಸಿದರು. ಬುದ್ಧನಿಗಿಂತ ಶಾಂತಿ ಸಂದೇಶ ಸಾರಿದ ಮತ್ತೋಬ್ಬ ವ್ಯಕ್ತಿ ಬೇಕಾ? ಅದೇ ಜನ ಕಾಶ್ಮೀರಿ ಪಂಡಿತರು, ಹಿಂದೂಗಳ ಕಾಶ್ಮೀರ ಕಣಿವೆ ತೊರೆಯಬೇಕೆಂದು ಮೈಕ್‍ನಲ್ಲಿ ಕೂಗಿದರು.

ಅದೇ ಜನರು ಭಯ ಹುಟ್ಟಿಸಲು ಕೊಂದರು, ಗರಗಸದಲ್ಲಿ ಕೊಯ್ದರು. ಸಾಕ್ಷಿ ಬೇಕು ಅಂದ್ರೆ ಸಾವಿರ ಸಾಕ್ಷಿಗಳು ಸಿಗುತ್ತವೆ ಎಂದು ಅವರು ನುಡಿದರು.

ಆ ಕಾಶ್ಮೀರಿ ಪಂಡಿತರ ಕುಟುಂಬದವರು ಇನ್ನೂ ಬದುಕಿದ್ದಾರೆ, ನಿರಾಶ್ರಿತರಾಗಿದ್ದಾರೆ. ಎಲ್ಲದರಲ್ಲೂ ರಾಜಕೀಯ ಹುಡುಕುವ ಪೂರ್ವಾಗ್ರಹ ಮನಸ್ಥಿತಿಗೆ ಅರ್ಥವಾಗಲ್ಲ. ಅರ್ಥ ಮಾಡಿಕೊಳ್ಳುವ ಮನಸ್ಥಿತಿ ಇದ್ದರೆ ನೋಡಿ ಸತ್ಯದ ವಿವೇಚನೆಗೆ ಒಳಗಾಗೋರು 

ಅವರಿಗೆ ಸತ್ಯವನ್ನೋ ನೋಡಿ ಒಪ್ಪಿಕೊಳ್ಳುವ ಮನಸ್ಸು-ಮನಸ್ಥಿತಿ ಇಲ್ಲ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು