2:10 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮಡಿಕೇರಿ: ಜೆಸಿಬಿ ತಂದು ಮನೆ ಒಡೆಯಲು ಮುಂದಾದ ನಗರಸಭೆ; ಮನೆ ಗ್ಯಾಸ್ ಆನ್ ಮಾಡಿ ಆತ್ಮಹತ್ಯೆ ಬೆದರಿಕೆಯೊಡ್ಡಿದ ಕುಟುಂಬ

22/03/2022, 09:50

ಮಡಿಕೇರಿ(reporterkarnataka.com): ಮಡಿಕೇರಿ‌ ನಗರದಲ್ಲಿ ಕಲಾವಿದನ ಕುಟುಂಬದಿಂದ ಆತ್ಮಹತ್ಯೆ ಹೈಡ್ರಾಮಾ‌ ನಡೆದಿದೆ. ಮನೆಯ ಗ್ಯಾಸ್ ಸಿಲಿಂಡರ್ ಆನ್ ಮಾಡಿ ಸಾಮೂಹಿಕ ಆತ್ಮಹತ್ಯೆ‌ ಮಾಡಿಕೊಳ್ಳುವುದಾಗಿ ಕುಟುಂಬ ಬೆದರಿಕೆ ಹಾಕಿದೆ.

ಚಿತ್ರ ಕಲಾವಿದ ಸಂದೀಪ್ ವಿರುದ್ಧ ಅಕ್ರಮ‌ ಮನೆ ನಿರ್ಮಾಣದ ಆರೋಪ ಇದ್ದು, ನಗರಸಭೆ ಜಾಗದಲ್ಲಿ ಅಕ್ರಮ‌ ಮನೆ ನಿರ್ಮಾಣ ಮಾಡಿಕೊಂಡಿರುವುದಾಗಿ ಹೇಳಲಾಗಿದೆ. ಅಕ್ರಮ‌ ಸಕ್ರಮದ ಅಡಿಯಲ್ಲಿ ಮನೆ ಸಕ್ರಮಕ್ಕೆ ಅರ್ಜಿ ಹಾಕಿದ್ದು, ಸಂದೀಪ್ ಇಂದು ಫೇಸ್ ಬುಕ್ ನಲ್ಲಿ ವ್ಯಂಗ್ಯ ಚಿತ್ರ ಪ್ರಕಟಿಸಿದ್ದರು.

ಸಂದೀಪ್ ವಿರುದ್ಧ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಗರ ಸಭೆ ಆಯುಕ್ತ ರಾಮದಾಸ್ ಜೆಸಿಬಿ ತಂದು ಮನೆ ಒಡೆಯಲು ಮುಂದಾಗಿದ್ದರು.

ಮನೆ ಒಡೆಯಲು ಮುಂದಾದಾಗ ಸಂದೀಪ್ ಕುಟುಂಬ ಆತ್ಮಹತ್ಯೆ ಬೆದರಿಕೆ ಹಾಕಿದ್ದು, ಮನೆ ಗ್ಯಾಸ್ ಆನ್ ಮಾಡಿ ಬೆಂಕಿಪೆಟ್ಟಿಗೆ ಹಿಡಿದು ಬೆದರಿಕೆಯೊಡ್ಡಿದ್ದಾರೆ‌. ಮಡಿಕೇರಿ ನಗರದ ಚೈನ್‌ಗೇಟ್ ಬಳಿ‌ ಘಟನೆ‌ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು