4:01 PM Friday4 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಮಡಿಕೇರಿ: ಜೆಸಿಬಿ ತಂದು ಮನೆ ಒಡೆಯಲು ಮುಂದಾದ ನಗರಸಭೆ; ಮನೆ ಗ್ಯಾಸ್ ಆನ್ ಮಾಡಿ ಆತ್ಮಹತ್ಯೆ ಬೆದರಿಕೆಯೊಡ್ಡಿದ ಕುಟುಂಬ

22/03/2022, 09:50

ಮಡಿಕೇರಿ(reporterkarnataka.com): ಮಡಿಕೇರಿ‌ ನಗರದಲ್ಲಿ ಕಲಾವಿದನ ಕುಟುಂಬದಿಂದ ಆತ್ಮಹತ್ಯೆ ಹೈಡ್ರಾಮಾ‌ ನಡೆದಿದೆ. ಮನೆಯ ಗ್ಯಾಸ್ ಸಿಲಿಂಡರ್ ಆನ್ ಮಾಡಿ ಸಾಮೂಹಿಕ ಆತ್ಮಹತ್ಯೆ‌ ಮಾಡಿಕೊಳ್ಳುವುದಾಗಿ ಕುಟುಂಬ ಬೆದರಿಕೆ ಹಾಕಿದೆ.

ಚಿತ್ರ ಕಲಾವಿದ ಸಂದೀಪ್ ವಿರುದ್ಧ ಅಕ್ರಮ‌ ಮನೆ ನಿರ್ಮಾಣದ ಆರೋಪ ಇದ್ದು, ನಗರಸಭೆ ಜಾಗದಲ್ಲಿ ಅಕ್ರಮ‌ ಮನೆ ನಿರ್ಮಾಣ ಮಾಡಿಕೊಂಡಿರುವುದಾಗಿ ಹೇಳಲಾಗಿದೆ. ಅಕ್ರಮ‌ ಸಕ್ರಮದ ಅಡಿಯಲ್ಲಿ ಮನೆ ಸಕ್ರಮಕ್ಕೆ ಅರ್ಜಿ ಹಾಕಿದ್ದು, ಸಂದೀಪ್ ಇಂದು ಫೇಸ್ ಬುಕ್ ನಲ್ಲಿ ವ್ಯಂಗ್ಯ ಚಿತ್ರ ಪ್ರಕಟಿಸಿದ್ದರು.

ಸಂದೀಪ್ ವಿರುದ್ಧ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಗರ ಸಭೆ ಆಯುಕ್ತ ರಾಮದಾಸ್ ಜೆಸಿಬಿ ತಂದು ಮನೆ ಒಡೆಯಲು ಮುಂದಾಗಿದ್ದರು.

ಮನೆ ಒಡೆಯಲು ಮುಂದಾದಾಗ ಸಂದೀಪ್ ಕುಟುಂಬ ಆತ್ಮಹತ್ಯೆ ಬೆದರಿಕೆ ಹಾಕಿದ್ದು, ಮನೆ ಗ್ಯಾಸ್ ಆನ್ ಮಾಡಿ ಬೆಂಕಿಪೆಟ್ಟಿಗೆ ಹಿಡಿದು ಬೆದರಿಕೆಯೊಡ್ಡಿದ್ದಾರೆ‌. ಮಡಿಕೇರಿ ನಗರದ ಚೈನ್‌ಗೇಟ್ ಬಳಿ‌ ಘಟನೆ‌ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು