4:00 AM Monday21 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಮಡಿಕೇರಿ: ಜೆಸಿಬಿ ತಂದು ಮನೆ ಒಡೆಯಲು ಮುಂದಾದ ನಗರಸಭೆ; ಮನೆ ಗ್ಯಾಸ್ ಆನ್ ಮಾಡಿ ಆತ್ಮಹತ್ಯೆ ಬೆದರಿಕೆಯೊಡ್ಡಿದ ಕುಟುಂಬ

22/03/2022, 09:50

ಮಡಿಕೇರಿ(reporterkarnataka.com): ಮಡಿಕೇರಿ‌ ನಗರದಲ್ಲಿ ಕಲಾವಿದನ ಕುಟುಂಬದಿಂದ ಆತ್ಮಹತ್ಯೆ ಹೈಡ್ರಾಮಾ‌ ನಡೆದಿದೆ. ಮನೆಯ ಗ್ಯಾಸ್ ಸಿಲಿಂಡರ್ ಆನ್ ಮಾಡಿ ಸಾಮೂಹಿಕ ಆತ್ಮಹತ್ಯೆ‌ ಮಾಡಿಕೊಳ್ಳುವುದಾಗಿ ಕುಟುಂಬ ಬೆದರಿಕೆ ಹಾಕಿದೆ.

ಚಿತ್ರ ಕಲಾವಿದ ಸಂದೀಪ್ ವಿರುದ್ಧ ಅಕ್ರಮ‌ ಮನೆ ನಿರ್ಮಾಣದ ಆರೋಪ ಇದ್ದು, ನಗರಸಭೆ ಜಾಗದಲ್ಲಿ ಅಕ್ರಮ‌ ಮನೆ ನಿರ್ಮಾಣ ಮಾಡಿಕೊಂಡಿರುವುದಾಗಿ ಹೇಳಲಾಗಿದೆ. ಅಕ್ರಮ‌ ಸಕ್ರಮದ ಅಡಿಯಲ್ಲಿ ಮನೆ ಸಕ್ರಮಕ್ಕೆ ಅರ್ಜಿ ಹಾಕಿದ್ದು, ಸಂದೀಪ್ ಇಂದು ಫೇಸ್ ಬುಕ್ ನಲ್ಲಿ ವ್ಯಂಗ್ಯ ಚಿತ್ರ ಪ್ರಕಟಿಸಿದ್ದರು.

ಸಂದೀಪ್ ವಿರುದ್ಧ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಗರ ಸಭೆ ಆಯುಕ್ತ ರಾಮದಾಸ್ ಜೆಸಿಬಿ ತಂದು ಮನೆ ಒಡೆಯಲು ಮುಂದಾಗಿದ್ದರು.

ಮನೆ ಒಡೆಯಲು ಮುಂದಾದಾಗ ಸಂದೀಪ್ ಕುಟುಂಬ ಆತ್ಮಹತ್ಯೆ ಬೆದರಿಕೆ ಹಾಕಿದ್ದು, ಮನೆ ಗ್ಯಾಸ್ ಆನ್ ಮಾಡಿ ಬೆಂಕಿಪೆಟ್ಟಿಗೆ ಹಿಡಿದು ಬೆದರಿಕೆಯೊಡ್ಡಿದ್ದಾರೆ‌. ಮಡಿಕೇರಿ ನಗರದ ಚೈನ್‌ಗೇಟ್ ಬಳಿ‌ ಘಟನೆ‌ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು