11:24 AM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ರಾಜ್ಯ ಸರಕಾರದಿಂದ ಜನತೆಯ ಜೇಬಿಗೆ ಕತ್ತರಿ : ಕೊರೊನಾದಿಂದ ತತ್ತರಿಸಿ ಹೋದ ನಡುವೆಯೆ ಈ ನಿರ್ಧಾರ !

10/06/2021, 05:42

ಬೆಂಗಳೂರು(Reporter Karnataka News) ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲ ಸೇರಿದಂತೆ ಅಗತ್ಯ ದಿನ ಬಳಕೆಯ ವಸ್ತುಗಳ ದರ ಏರಿಕೆಯ ಹೊರೆ ಹೊರಲಾಗದೆ ಒದ್ದಾಡುತ್ತಿರುವ ಜನತೆಗೆ ರಾಜ್ಯ ಸರಕಾರ ವಿದ್ಯುತ್‌ ದರ ಏರಿಕೆ ಮಾಡಿ ಮತ್ತೊಂದು ಶಾಕ್‌ ನೀಡಿದೆ.

ಪ್ರತಿ ಯೂನಿಟ್‌ ವಿದ್ಯುತ್‌ ದರವನ್ನು ಸರಾಸರಿ 30 ಪೈಸೆ ಏರಿಕೆ ಮಾಡಲಾಗಿದೆ. ಒಟ್ಟಾರೆ ಸರಾಸರಿ ಶೇ. 3.84 ರಷ್ಟು ವಿದ್ಯುತ್‌ ದುಬಾರಿಯಾಗಿದೆ. ಏಪ್ರಿಲ್‌ 1 ರಿಂದಲೇ ಈ ಪರಿಷ್ಕೃತ ದರಗಳು ಜಾರಿಗೆ ಬಂದಿವೆ. ಮುಂದಿನ ಮೀಟರ್ ರೀಡಿಂಗ್‌ ವೇಳೆ ಈ ದರಗಳು ಅನ್ವಯವಾಗಲಿವೆ.
ಏಪ್ರಿಲ್‌ ಮತ್ತು ಮೇ ತಿಂಗಳ ದರ ಪರಿಷ್ಕರಣೆ ಬಾಕಿಯನ್ನು ಕೊರೊನಾ ಕಾರಣಕ್ಕೆ ಅಕ್ಟೋಬರ್‌ ಮತ್ತು ನವೆಂಬರ್‌ನಲ್ಲಿ ವಸೂಲಿ ಮಾಡಲು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಆದೇಶಿಸಿದೆ. ಉಪಚುನಾವಣೆ, ಪಂಚಾಯತ್‌ ಚುನಾವಣೆ ಮತ್ತು ಕೊರೊನಾ ಕಾರಣಕ್ಕೆ ದರ ಪರಿಷ್ಕರಣೆ ವಿಳಂಬವಾಗಿದೆ ಎಂದು ಆಯೋಗ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು