7:30 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಅಪ್ರಾಪ್ತ ಬಾಲಕಿಯ ಬ್ಲಾಕ್ ಮೇಲ್ ಮಾಡಿ ವೇಶ್ಯಾವಾಟಿಕೆಗೆ ಬಳಕೆ: ಸೋ ಕಾಲ್ಡ್ ಸಮಾಜ ಸೇವಕ ಸಿಸಿಬಿ ಪೊಲೀಸರ ಬಲೆಗೆ

22/03/2022, 13:51

ಮಂಗಳೂರು(reporterkarnataka.com): ನಗರದ ನಂದಿಗುಡ್ಡೆ ಸಮೀಪದ ಅಪಾರ್ಟ್ ಮೆಂಟ್ ವೊಂದರಲ್ಲಿ ಪಿಯುಸಿಯ ಅಪ್ರಾಪ್ತ ವಯಸ್ಸಿನ ಹುಡುಗಿಯನ್ನು ಬಳಸಿಕೊಂಡು ಮಾಡುತ್ತಿದ್ದ ವೇಶ್ಯಾವಾಟಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜ ಸೇವಕ(?) ಅಬ್ದುಲ್ ರಾಝೀಕ್ ಉಳ್ಳಾಲ್(44)ಎಂಬಾತನನ್ನು ಸಿಸಿಬಿ ಪೊಲೀಸರು ಪೋಕ್ಸೋ ಪ್ರಕರಣದಲ್ಲಿ ಬಂಧಿಸಲಾಗಿದೆ.

ಅಪ್ರಾಪ್ತ ವಯಸ್ಸಿನ ಪಿಯುಸಿ ಹುಡುಗಿಯರಿಗೆ ಸಹಾಯ ಮಾಡುವ ನೆಪದಲ್ಲಿ ಅಪಾರ್ಟ್ ಮೆಂಟಿಗೆ ಕರೆಸಿ, ನಂತರ ಅವರನ್ನು ಬ್ಲಾಕ್ ಮೇಲ್ ಮಾಡಿ ಬಲವಂತವಾಗಿ ಸೆಕ್ಸ್ ಗೆ ಬಳಸಲಾಗುತ್ತಿತ್ತು. ಅಪ್ರಾಪ್ತ ಹುಡುಗಿಯರನ್ನು 65 ವರ್ಷ ದಾಟಿದ ಮುದುಕರಿಗೂ ಒಪ್ಪಿಸಲಾಗುತ್ತಿತ್ತು. ಈ ಪ್ರಕರಣ ಸಂಬಂಧಿಸಿದಂತೆ ಈಗಾಗಲೇ 15 ಮಂದಿಯನ್ನು ಬಂಧಿಸಲಾಗಿತ್ತು. ಸಂತ್ರಸ್ತ ಅಪ್ರಾಪ್ತ ವಯಸ್ಸಿನ ಬಾಲಕಿಯರು ನೀಡಿದ ದೂರಿನ ಹಿನ್ನೆಲೆ ಹಾಗೂ ಪಿಂಪ್ ಮಹಿಳೆಯರು ಬಳಸಿದ ಮೊಬೈಲ್ ಫೋನ್ ನಲ್ಲಿದ್ದ ನಂಬರ್ ಗಳ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿ ಈಗಾಗಲೇ 15 ಮಂದಿಯನ್ನು ಬಂಧಿಸಿದ್ದಾರೆ. ಇವರಲ್ಲಿ ಇಬ್ಬರು ಹಿರಿಯ ನಾಗರಿಕರು ಎನ್ನುವುದು ಗಮನಾರ್ಹ ವಿಷಯವಾಗಿದೆ. ಇದೀಗ ಸಮಾಜ ಸೇವಕ, ಮಾಜಿ ಸಚಿವ ಖಾದರ್ ಅವರ ಆಪ್ತ ಎಂದು ಹೇಳಿಕೊಂಡು ತಿರುಗುತ್ತಿದ್ದ ಅಬ್ದುಲ್ ರಾಝೀಕ್ ಎಂಬಾತನ ಬಂಧನವಾಗಿದೆ.

ಬಂಧಿತ ಆರೋಪಿ ಕಾಂಗ್ರೆಸ್ ಮಾತ್ರವಲ್ಲದೆ ಬಿಜೆಪಿ ನಾಯಕರ ಜತೆ, ಪೊಲೀಸ್ ಅಧಿಕಾರಿಗಳ ಜತೆ, ಸರಕಾರಿ ಅಧಿಕಾರಿಗಳ ಜತೆ ಒಡನಾಟ ಇಟ್ಟುಕೊಂಡಿದ್ದ.

ಇತ್ತೀಚಿನ ಸುದ್ದಿ

ಜಾಹೀರಾತು