12:45 AM Monday21 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಅಪ್ರಾಪ್ತ ಬಾಲಕಿಯ ಬ್ಲಾಕ್ ಮೇಲ್ ಮಾಡಿ ವೇಶ್ಯಾವಾಟಿಕೆಗೆ ಬಳಕೆ: ಸೋ ಕಾಲ್ಡ್ ಸಮಾಜ ಸೇವಕ ಸಿಸಿಬಿ ಪೊಲೀಸರ ಬಲೆಗೆ

22/03/2022, 13:51

ಮಂಗಳೂರು(reporterkarnataka.com): ನಗರದ ನಂದಿಗುಡ್ಡೆ ಸಮೀಪದ ಅಪಾರ್ಟ್ ಮೆಂಟ್ ವೊಂದರಲ್ಲಿ ಪಿಯುಸಿಯ ಅಪ್ರಾಪ್ತ ವಯಸ್ಸಿನ ಹುಡುಗಿಯನ್ನು ಬಳಸಿಕೊಂಡು ಮಾಡುತ್ತಿದ್ದ ವೇಶ್ಯಾವಾಟಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜ ಸೇವಕ(?) ಅಬ್ದುಲ್ ರಾಝೀಕ್ ಉಳ್ಳಾಲ್(44)ಎಂಬಾತನನ್ನು ಸಿಸಿಬಿ ಪೊಲೀಸರು ಪೋಕ್ಸೋ ಪ್ರಕರಣದಲ್ಲಿ ಬಂಧಿಸಲಾಗಿದೆ.

ಅಪ್ರಾಪ್ತ ವಯಸ್ಸಿನ ಪಿಯುಸಿ ಹುಡುಗಿಯರಿಗೆ ಸಹಾಯ ಮಾಡುವ ನೆಪದಲ್ಲಿ ಅಪಾರ್ಟ್ ಮೆಂಟಿಗೆ ಕರೆಸಿ, ನಂತರ ಅವರನ್ನು ಬ್ಲಾಕ್ ಮೇಲ್ ಮಾಡಿ ಬಲವಂತವಾಗಿ ಸೆಕ್ಸ್ ಗೆ ಬಳಸಲಾಗುತ್ತಿತ್ತು. ಅಪ್ರಾಪ್ತ ಹುಡುಗಿಯರನ್ನು 65 ವರ್ಷ ದಾಟಿದ ಮುದುಕರಿಗೂ ಒಪ್ಪಿಸಲಾಗುತ್ತಿತ್ತು. ಈ ಪ್ರಕರಣ ಸಂಬಂಧಿಸಿದಂತೆ ಈಗಾಗಲೇ 15 ಮಂದಿಯನ್ನು ಬಂಧಿಸಲಾಗಿತ್ತು. ಸಂತ್ರಸ್ತ ಅಪ್ರಾಪ್ತ ವಯಸ್ಸಿನ ಬಾಲಕಿಯರು ನೀಡಿದ ದೂರಿನ ಹಿನ್ನೆಲೆ ಹಾಗೂ ಪಿಂಪ್ ಮಹಿಳೆಯರು ಬಳಸಿದ ಮೊಬೈಲ್ ಫೋನ್ ನಲ್ಲಿದ್ದ ನಂಬರ್ ಗಳ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿ ಈಗಾಗಲೇ 15 ಮಂದಿಯನ್ನು ಬಂಧಿಸಿದ್ದಾರೆ. ಇವರಲ್ಲಿ ಇಬ್ಬರು ಹಿರಿಯ ನಾಗರಿಕರು ಎನ್ನುವುದು ಗಮನಾರ್ಹ ವಿಷಯವಾಗಿದೆ. ಇದೀಗ ಸಮಾಜ ಸೇವಕ, ಮಾಜಿ ಸಚಿವ ಖಾದರ್ ಅವರ ಆಪ್ತ ಎಂದು ಹೇಳಿಕೊಂಡು ತಿರುಗುತ್ತಿದ್ದ ಅಬ್ದುಲ್ ರಾಝೀಕ್ ಎಂಬಾತನ ಬಂಧನವಾಗಿದೆ.

ಬಂಧಿತ ಆರೋಪಿ ಕಾಂಗ್ರೆಸ್ ಮಾತ್ರವಲ್ಲದೆ ಬಿಜೆಪಿ ನಾಯಕರ ಜತೆ, ಪೊಲೀಸ್ ಅಧಿಕಾರಿಗಳ ಜತೆ, ಸರಕಾರಿ ಅಧಿಕಾರಿಗಳ ಜತೆ ಒಡನಾಟ ಇಟ್ಟುಕೊಂಡಿದ್ದ.

ಇತ್ತೀಚಿನ ಸುದ್ದಿ

ಜಾಹೀರಾತು