2:00 PM Thursday20 - November 2025
ಬ್ರೇಕಿಂಗ್ ನ್ಯೂಸ್
ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌…

ಇತ್ತೀಚಿನ ಸುದ್ದಿ

ಗೋವಾ: ಬಿಜೆಪಿ ಆಂತರಿಕ ಬಿಕ್ಕಟ್ಟು ಕೊನೆಗೂ ಶಮನ; ಮುಖ್ಯಮಂತ್ರಿಯಾಗಿ 2ನೇ ಬಾರಿ ಪ್ರಮೋದ ಸಾವಂತ್  ಆಯ್ಕೆ

22/03/2022, 16:15

ಪಣಜಿ(reporterkarnataka.com);

ಪಣಜಿ: ಸರಕಾರ ರಚನೆ ಕುರಿತು ಗೋವಾ ಬಿಜೆಪಿಯೊಳಗೆ ಉದ್ಭವಿಸಿರುವ ಬಿಕ್ಕಟ್ಟು ಕೊನೆಗೂ

ಪರಿಹಾರಗೊಂಡಿದೆ. ಫಲಿತಾಂಶ ಬಂದು ಸುಮಾರು 10 ದಿನಗಳ ಬಳಿಕ ಸರಕಾರ ರಚನೆಗೆ ಹಾದಿ ಸುಗಮಗೊಂಡಿದೆ. ಪ್ರಮೋದ ಸಾವಂತ್ ಮುಖ್ಯಮಂತ್ರಿಯಾಗಿ ಎರಡನೇ ಬಾರಿ ಆಯ್ಕೆಯಾಗಿದ್ದಾರೆ. 

ಗೋವಾದ ಮುಖ್ಯಮಂತ್ರಿ ಸ್ಥಾನಕ್ಕಾಗಿ

ಹಂಗಾಮಿ ಮುಖ್ಯಮಂತ್ರಿ ಪ್ರಮೋದ ಸಾವಂತ್ ಮತ್ತು ಶಾಸಕ ವಿಶ್ವಜಿತ್ ರಾಭೆ ನಡುವೆ ಹಗ್ಗ ಜಗ್ಗಾಟ ನಡೆಯುತ್ತಿತ್ತು. ಇದರಿಂದ ಸರಕಾರ ರಚನೆಗೆ ಹಿನ್ನಡೆ ಉಂಟಾಗಿತ್ತು. ಇದರಿಂದ ಗೋವಾದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಸ್ಥಾಪನೆಗಾಗಿ ನೂತನ ಮುಖ್ಯಮಂತ್ರಿಗಳ ಆಯ್ಕೆಗೆ ಕೇಂದ್ರ ವೀಕ್ಷಕರಾದ ಕೇಂದ್ರ ಕೃಷಿ ಸಚಿವ ನರೇಂದ್ರಸಿಂಗ್ ತೋಮರ್ ಮತ್ತು ಪಶುಸಂಗೋಪನಾ ಖಾತೆಯ ರಾಜ್ಯ ಸಚಿವ ಎಲ್.ಮುರುಗನ್ ಸೋಮವಾರ

ಪಣಜಿಗೆ ಆಗಮಿಸಿದ್ದರು. ಇದೀಗ ಕೇಂದ್ರ ವೀಕ್ಷಕರ ನೇತೃತ್ವದಲ್ಲಿ ಪಣಜಿಯಲ್ಲಿ ಬಿಜೆಪಿ ಸಚಿವ ಸಂಪುಟ ಸಭೆ ನಡೆಸಲಾಯಿತು. ಬಿಜೆಪಿ ನಾಯಕರು ವಿಶ್ವಜಿತ್ ರಾಣೆ ಅವರ ಜತೆ ಮಾತುಕತೆ ನಡೆಸಿ

ಅವರ ಅಸಮಾಧಾನ ಉಪಶಮನಕ್ಕೆ ಸೂತ್ರವೊಂದನ್ನು ಹಣೆದಿದ್ದಾರೆ. ಹಾಗೆ

ಸಾವಂತ್  ಅವರನ್ನು ವಿಧಾನಸಭೆಯ ನಾಯಕನನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು