12:34 AM Tuesday27 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಚಿಕ್ಕೋಡಿಯಲ್ಲಿ ಪ್ರವಾಹ ಮುನ್ನೆಚ್ಚರಿಕೆ: ನದಿ ತೀರಕ್ಕೆ ಎನ್ ಡಿಆರ್ ಎಫ್‌ ತಂಡ ನಿಯೋಜನೆ

10/06/2021, 08:03

ಬೆಳಗಾವಿ(reporterkarnataka news): ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಮಳೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಚಿಕ್ಕೋಡಿ ತಾಲೂಕಿನ ನದಿಗಳಿಗೆ ಪ್ರವಾಹ ಭೀತಿ ಎದುರಾಗಿದ್ದು, ನದಿ ತೀರದಲ್ಲಿ ಮುಂಜಾಗ್ರತಾ ಕ್ರಮವಾಗಿ ಎನ್ ಡಿಆರ್ ಎಫ್‌ ತಂಡ ನಿಯೋಜಿಸಲಾಗಿದೆ.

ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದ ಕೃಷ್ಣಾ ನದಿ ತೀರದಲ್ಲಿ 21 ಜನರ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವನ್ನು ನಿಯೋಜಿಸಲಾಗಿದೆ.

ಯಡೂರ ಗ್ರಾಮಕ್ಕೆ ಈ ಎನ್ ಡಿ ಆರ್‌ಎಫ್‌ತಂಡ ಆಗಮಿಸಿದೆ. ಇಲ್ಲಿಯ ಸಿದ್ಧ ತೀರ್ಥಯಾತ್ರಿ  ನಿವಾಸದಲ್ಲಿ ಬೀಡುಬಿಟ್ಟಿದ್ದಾರೆ. 

ಕೊಂಕಣ ಪ್ರದೇಶಗಳಲ್ಲಿ ಮಳೆ ಪ್ರಾರಂಭವಾಗಿದೆ. ಹೀಗಾಗಿ ಚಿಕ್ಕೋಡಿ ತಾಲೂಕಿನ ಕೃಷ್ಣಾ, ವೇದಗಂಗಾ, ದೂಧಗಂಗಾ ನದಿಗಳಿಗೆ ಸಣ್ಣ ಪ್ರಮಾಣದಲ್ಲಿ ನೀರು ಏರಿಕೆಯಾಗುತ್ತಿದೆ. ಇದು ಪ್ರವಾಹದ ಮುನ್ಸೂಚನೆಯನ್ನು ನೀಡುತ್ತಿದ್ದು, ಈ ಕಾರಣಕ್ಕಾಗಿ ಯಾವುದೇ ಪ್ರಾಣ ಹಾನಿ ಆಗದಂತೆ ಜಿಲ್ಲಾಡಳಿತ ಹಾಗೂ ತಾಲೂಕಾಡಳಿತ ಮುಂಜಾಗ್ರತಾ ಕ್ರಮವಾಗಿ ಈ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವನ್ನು ನಿಯೋಜಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು