3:33 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಗೋವಾ: 28ರಂದು ಬಿಜೆಪಿ ನೇತೃತ್ವದ ನೂತನ ಸರಕಾರ ಪ್ರತಿಜ್ಞೆ ಸ್ವೀಕಾರ: ಸಾವಂತ್ 2ನೇ ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ

24/03/2022, 09:19

ಪಣಜಿ(reporterkarnataka.com);

ಸರಕಾರ ರಚನೆ ಕುರಿತು ಗೋವಾ ಬಿಜೆಪಿಯೊಳಗೆ ಉದ್ಭವಿಸಿರುವ ಬಿಕ್ಕಟ್ಟು ಕೊನೆಗೂ ಪರಿಹಾರಗೊಂಡಿದ್ದು, ಮಾರ್ಚ್ 28ರಂದು ಪ್ರಮೋದ್ ಸಾವಂತ್ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಫಲಿತಾಂಶ ಬಂದು ಸುಮಾರು 15 ದಿನಗಳ ಬಳಿಕ ಸರಕಾರ ರಚನೆಗೆ ಹಾದಿ ಸುಗಮಗೊಂಡಿದೆ. ಪ್ರಮೋದ ಸಾವಂತ್ ಮುಖ್ಯಮಂತ್ರಿಯಾಗಿ ಎರಡನೇ ಬಾರಿ ಆಯ್ಕೆಯಾಗಿದ್ದಾರೆ. 

ಗೋವಾದ ಮುಖ್ಯಮಂತ್ರಿ ಸ್ಥಾನಕ್ಕಾಗಿ ಹಂಗಾಮಿ ಮುಖ್ಯಮಂತ್ರಿ ಪ್ರಮೋದ ಸಾವಂತ್ ಮತ್ತು ಶಾಸಕ ವಿಶ್ವಜಿತ್ ರಾಭೆ ನಡುವೆ ಹಗ್ಗ ಜಗ್ಗಾಟ ನಡೆಯುತ್ತಿತ್ತು. ಇದರಿಂದ ಸರಕಾರ ರಚನೆಗೆ ಹಿನ್ನಡೆ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಗೋವಾದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಸ್ಥಾಪನೆಗಾಗಿ ನೂತನ ಮುಖ್ಯಮಂತ್ರಿಗಳ ಆಯ್ಕೆಗೆ ಕೇಂದ್ರ ವೀಕ್ಷಕರಾದ ಕೇಂದ್ರ ಕೃಷಿ ಸಚಿವ ನರೇಂದ್ರಸಿಂಗ್ ತೋಮರ್ ಮತ್ತು ಪಶುಸಂಗೋಪನಾ ಖಾತೆಯ ರಾಜ್ಯ ಸಚಿವ ಎಲ್.ಮುರುಗನ್ ಸೋಮವಾರ ಪಣಜಿಗೆ ಆಗಮಿಸಿದ್ದರು. ಕೇಂದ್ರ ವೀಕ್ಷಕರ ನೇತೃತ್ವದಲ್ಲಿ ಪಣಜಿಯಲ್ಲಿ ಬಿಜೆಪಿ ಸಚಿವ ಸಂಪುಟ ಸಭೆ ನಡೆಸಲಾಗಿತ್ತು. ಬಿಜೆಪಿ ನಾಯಕರು ವಿಶ್ವಜಿತ್ ರಾಣೆ ಅವರ ಜತೆ ಮಾತುಕತೆ ನಡೆಸಿ ಅವರ ಅಸಮಾಧಾನ ಉಪಶಮನಕ್ಕೆ ಸೂತ್ರವೊಂದನ್ನು ಹಣೆದಿದ್ದರು. ಹಾಗೆ ಸಾವಂತ್  ಅವರನ್ನು ವಿಧಾನಸಭೆಯ ನಾಯಕನನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು