9:13 AM Saturday7 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ  ರಾಯಿಟರ್ಸ್ ಸಂಸ್ಥೆಯ ಪತ್ರಕರ್ತೆಯ ಮೃತದೇಹ ಪತ್ತೆ; ಕೊಲೆ ಶಂಕೆ

24/03/2022, 12:52

ಬೆಂಗಳೂರು(reporterkarnataka.com):  ರಾಯಿಟರ್ಸ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತೆಯೊಬ್ಬರ ಮೃತದೇಹ ಅವರ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪತಿ ಕೊಲೆ ಮಾಡಿರುವುದಾಗಿ ಆಕೆಯ ಕುಟುಂಬದವರು ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಮೃತಪಟ್ಟವರನ್ನು ಪತ್ರಕರ್ತೆ ಶ್ರುತಿ (35) ಎಂದು ಗುರುತಿಸಲಾಗಿದೆ.

ಶ್ರುತಿ ಹಾಗೂ ಅನೀಶ್ ವಿವಾಹ 2017ರಲ್ಲಿ ಆಗಿತ್ತು.ಬೆಂಗಳೂರಿಗೆ ಮರಳಿದ್ದ ದಂಪತಿ ವೈಟ್ ಫೀಲ್ಡ್ ನ ನಲ್ಲೂರುಹಳ್ಳಿ ರಸ್ತೆ ಬಳಿಯ ಎಸ್.ವಿ.ಮೈಪೇರ್ ವಸತಿ ಸಮುಚ್ಚಯದ ಫ್ಲ್ಯಾಟ್ನಲ್ಲಿ ವಾಸವಾಗಿದ್ದರು. ಖಾಸಗಿ ಕಂಪನಿ ಉದ್ಯೋಗಿಯಾಗಿರುವ ಅನೀಶ್, ಪ್ರತಿನಿತ್ಯ ಶ್ರುತಿಗೆ ಚಿತ್ರಹಿಂಸೆ ನೀಡುತ್ತಿದ್ದ. ಸಂಬಳದ ಹಣವನ್ನೆಲ್ಲಾ ತವರು ಮನೆಗೆ ನೀಡುತ್ತೀಯಾ ಎಂದು ಹೇಳಿ ಹಲ್ಲೆ ನಡೆಸುತ್ತಿದ್ದ. ಒಮ್ಮೊಮ್ಮೆ ಮದ್ಯಪಾನ ಮಾಡಿ ಮನೆಗೆ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದ ಎಂದು ಶ್ರುತಿ ಸಹೋದರ ನಿಶಾಂತ್ ನಾರಾಯಣನ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು