11:08 AM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಕದ್ರಿ ದೇಗುಲ: ಊಟಕ್ಕೆ ಬಂದ ವಿದ್ಯಾರ್ಥಿಗಳಿಂದ ಹುಂಡಿ ಹಣ ಎಣಿಕೆ; ಕಳಂಕಿತ ಮಹಿಳಾ ಟ್ರಸ್ಟಿ ಆಗಮನಕ್ಕೆ ಆಕ್ಷೇಪ

24/03/2022, 14:27

ಮಂಗಳೂರು(reporterkarnataka.com): ಇತಿಹಾಸ ಪ್ರಸಿದ್ಧ ಕಾರಣಿಕ ಕ್ಷೇತ್ರವಾದ ಕದ್ರಿ ಮಂಜುನಾಥ ಕ್ಷೇತ್ರದಲ್ಲಿ ಈ ಬಾರಿ ಹುಂಡಿ ಎಣಿಕೆಗೆ ಜನ ಬಾರದ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಊಟಕ್ಕೆ ಬಂದ ವಿದ್ಯಾರ್ಥಿಗಳಿಂದಲೇ ಕಾಣಿಕೆ ಹಣ ಲೆಕ್ಕ ಮಾಡಿಸಿದ ಘಟನೆ ಬೆಳಕಿಗೆ ಬಂದಿದೆ.

ಕದ್ರಿ ಶ್ರೀ ಮಂಜುನಾಥ ಕ್ಷೇತ್ರದಲ್ಲಿ ಕಾಣಿಕೆ ಹುಂಡಿ ಹಗರಣ ಬೆಳಕಿಗೆ ಬಂದ ಬಳಿಕ ಗುರುವಾರ ಕ್ಷೇತ್ರದಲ್ಲಿ ಹುಂಡಿ ಎಣಿಕೆ ನಡೆಯುತ್ತಿದ್ದು, ಹುಂಡಿ ಹಣ ಕದ್ದ ಆರೋಪದ ಕಳಂಕಿತ ಮಹಿಳಾ ಟ್ರಸ್ಟಿ ಆಗಮಿಸಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದೆ ಎಂದು ತಿಳಿದು ಬಂದಿದೆ.

ಬೆಳಗ್ಗೆ 10. 30ಕ್ಕೆ ದೇವಸ್ಥಾನದ ಮಂಜುಶ್ರೀ ಸಭಾಬವನದಲ್ಲಿ ಹುಂಡಿ ಎಣಿಕೆ ಆರಂಭವಾಗಿದ್ದು, ಆಡಳಿತಾಧಿಕಾರಿ ಮತ್ತು ಒಬ್ಬರೇ ಟ್ರಸ್ಟಿ ಮನೋಹರ್ ಸುವರ್ಣ ಇದ್ದರು. 

ಸ್ವಲ್ಪ ಹೊತ್ತಿನ ಬಳಿಕ ಕಳಂಕಿತ ಮಹಿಳಾ ಟ್ರಸ್ಟಿ ಎಣಿಕೆ ನಡೆಯುತ್ತಿದ್ದ ಹಾಲ್ ಗೆ ಆಗಮಿಸಿದರು. ಇದಕ್ಕೆ ಆಡಳಿತಾಧಿಕಾರಿ ಬಳಿ ಆಕ್ಷೇಪ ವ್ಯಕ್ತಪಡಿಸಲಾಯಿತು. ಸ್ವಲ್ಪ ಸಮಯ ಕುಳಿತ ಬಳಿಕ ಆರೋಪಕ್ಕೊಳಗಾಗಿರುವ ಟ್ರಸ್ಟಿ ವಾಪಸ್ ತೆರಳಿದ್ದಾರೆ ಎಂದು ತಿಳಿದು ಬಂದಿದೆ.

ಈ ನಡುವೆ ಇನ್ನೊಬ್ಬ ಟ್ರಸ್ಟಿಯವರು ಮಹಿಳಾ ಟ್ರಸ್ಟಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಠಾಣೆಯಿಂದ ನೇರವಾಗಿ ಹುಂಡಿ ಎಣಿಕೆ ನಡೆಯುವ ಕೊಠಡಿಗೆ ಮಹಿಳಾ ಟ್ರಸ್ಟಿ ಆಗಮಿಸಿದ್ದರು ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು