8:29 AM Wednesday23 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ಕದ್ರಿ ದೇಗುಲ: ಊಟಕ್ಕೆ ಬಂದ ವಿದ್ಯಾರ್ಥಿಗಳಿಂದ ಹುಂಡಿ ಹಣ ಎಣಿಕೆ; ಕಳಂಕಿತ ಮಹಿಳಾ ಟ್ರಸ್ಟಿ ಆಗಮನಕ್ಕೆ ಆಕ್ಷೇಪ

24/03/2022, 14:27

ಮಂಗಳೂರು(reporterkarnataka.com): ಇತಿಹಾಸ ಪ್ರಸಿದ್ಧ ಕಾರಣಿಕ ಕ್ಷೇತ್ರವಾದ ಕದ್ರಿ ಮಂಜುನಾಥ ಕ್ಷೇತ್ರದಲ್ಲಿ ಈ ಬಾರಿ ಹುಂಡಿ ಎಣಿಕೆಗೆ ಜನ ಬಾರದ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಊಟಕ್ಕೆ ಬಂದ ವಿದ್ಯಾರ್ಥಿಗಳಿಂದಲೇ ಕಾಣಿಕೆ ಹಣ ಲೆಕ್ಕ ಮಾಡಿಸಿದ ಘಟನೆ ಬೆಳಕಿಗೆ ಬಂದಿದೆ.

ಕದ್ರಿ ಶ್ರೀ ಮಂಜುನಾಥ ಕ್ಷೇತ್ರದಲ್ಲಿ ಕಾಣಿಕೆ ಹುಂಡಿ ಹಗರಣ ಬೆಳಕಿಗೆ ಬಂದ ಬಳಿಕ ಗುರುವಾರ ಕ್ಷೇತ್ರದಲ್ಲಿ ಹುಂಡಿ ಎಣಿಕೆ ನಡೆಯುತ್ತಿದ್ದು, ಹುಂಡಿ ಹಣ ಕದ್ದ ಆರೋಪದ ಕಳಂಕಿತ ಮಹಿಳಾ ಟ್ರಸ್ಟಿ ಆಗಮಿಸಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದೆ ಎಂದು ತಿಳಿದು ಬಂದಿದೆ.

ಬೆಳಗ್ಗೆ 10. 30ಕ್ಕೆ ದೇವಸ್ಥಾನದ ಮಂಜುಶ್ರೀ ಸಭಾಬವನದಲ್ಲಿ ಹುಂಡಿ ಎಣಿಕೆ ಆರಂಭವಾಗಿದ್ದು, ಆಡಳಿತಾಧಿಕಾರಿ ಮತ್ತು ಒಬ್ಬರೇ ಟ್ರಸ್ಟಿ ಮನೋಹರ್ ಸುವರ್ಣ ಇದ್ದರು. 

ಸ್ವಲ್ಪ ಹೊತ್ತಿನ ಬಳಿಕ ಕಳಂಕಿತ ಮಹಿಳಾ ಟ್ರಸ್ಟಿ ಎಣಿಕೆ ನಡೆಯುತ್ತಿದ್ದ ಹಾಲ್ ಗೆ ಆಗಮಿಸಿದರು. ಇದಕ್ಕೆ ಆಡಳಿತಾಧಿಕಾರಿ ಬಳಿ ಆಕ್ಷೇಪ ವ್ಯಕ್ತಪಡಿಸಲಾಯಿತು. ಸ್ವಲ್ಪ ಸಮಯ ಕುಳಿತ ಬಳಿಕ ಆರೋಪಕ್ಕೊಳಗಾಗಿರುವ ಟ್ರಸ್ಟಿ ವಾಪಸ್ ತೆರಳಿದ್ದಾರೆ ಎಂದು ತಿಳಿದು ಬಂದಿದೆ.

ಈ ನಡುವೆ ಇನ್ನೊಬ್ಬ ಟ್ರಸ್ಟಿಯವರು ಮಹಿಳಾ ಟ್ರಸ್ಟಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಠಾಣೆಯಿಂದ ನೇರವಾಗಿ ಹುಂಡಿ ಎಣಿಕೆ ನಡೆಯುವ ಕೊಠಡಿಗೆ ಮಹಿಳಾ ಟ್ರಸ್ಟಿ ಆಗಮಿಸಿದ್ದರು ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು