10:38 AM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಕದ್ರಿ ದೇಗುಲ: ಊಟಕ್ಕೆ ಬಂದ ವಿದ್ಯಾರ್ಥಿಗಳಿಂದ ಹುಂಡಿ ಹಣ ಎಣಿಕೆ; ಕಳಂಕಿತ ಮಹಿಳಾ ಟ್ರಸ್ಟಿ ಆಗಮನಕ್ಕೆ ಆಕ್ಷೇಪ

24/03/2022, 14:27

ಮಂಗಳೂರು(reporterkarnataka.com): ಇತಿಹಾಸ ಪ್ರಸಿದ್ಧ ಕಾರಣಿಕ ಕ್ಷೇತ್ರವಾದ ಕದ್ರಿ ಮಂಜುನಾಥ ಕ್ಷೇತ್ರದಲ್ಲಿ ಈ ಬಾರಿ ಹುಂಡಿ ಎಣಿಕೆಗೆ ಜನ ಬಾರದ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಊಟಕ್ಕೆ ಬಂದ ವಿದ್ಯಾರ್ಥಿಗಳಿಂದಲೇ ಕಾಣಿಕೆ ಹಣ ಲೆಕ್ಕ ಮಾಡಿಸಿದ ಘಟನೆ ಬೆಳಕಿಗೆ ಬಂದಿದೆ.

ಕದ್ರಿ ಶ್ರೀ ಮಂಜುನಾಥ ಕ್ಷೇತ್ರದಲ್ಲಿ ಕಾಣಿಕೆ ಹುಂಡಿ ಹಗರಣ ಬೆಳಕಿಗೆ ಬಂದ ಬಳಿಕ ಗುರುವಾರ ಕ್ಷೇತ್ರದಲ್ಲಿ ಹುಂಡಿ ಎಣಿಕೆ ನಡೆಯುತ್ತಿದ್ದು, ಹುಂಡಿ ಹಣ ಕದ್ದ ಆರೋಪದ ಕಳಂಕಿತ ಮಹಿಳಾ ಟ್ರಸ್ಟಿ ಆಗಮಿಸಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದೆ ಎಂದು ತಿಳಿದು ಬಂದಿದೆ.

ಬೆಳಗ್ಗೆ 10. 30ಕ್ಕೆ ದೇವಸ್ಥಾನದ ಮಂಜುಶ್ರೀ ಸಭಾಬವನದಲ್ಲಿ ಹುಂಡಿ ಎಣಿಕೆ ಆರಂಭವಾಗಿದ್ದು, ಆಡಳಿತಾಧಿಕಾರಿ ಮತ್ತು ಒಬ್ಬರೇ ಟ್ರಸ್ಟಿ ಮನೋಹರ್ ಸುವರ್ಣ ಇದ್ದರು. 

ಸ್ವಲ್ಪ ಹೊತ್ತಿನ ಬಳಿಕ ಕಳಂಕಿತ ಮಹಿಳಾ ಟ್ರಸ್ಟಿ ಎಣಿಕೆ ನಡೆಯುತ್ತಿದ್ದ ಹಾಲ್ ಗೆ ಆಗಮಿಸಿದರು. ಇದಕ್ಕೆ ಆಡಳಿತಾಧಿಕಾರಿ ಬಳಿ ಆಕ್ಷೇಪ ವ್ಯಕ್ತಪಡಿಸಲಾಯಿತು. ಸ್ವಲ್ಪ ಸಮಯ ಕುಳಿತ ಬಳಿಕ ಆರೋಪಕ್ಕೊಳಗಾಗಿರುವ ಟ್ರಸ್ಟಿ ವಾಪಸ್ ತೆರಳಿದ್ದಾರೆ ಎಂದು ತಿಳಿದು ಬಂದಿದೆ.

ಈ ನಡುವೆ ಇನ್ನೊಬ್ಬ ಟ್ರಸ್ಟಿಯವರು ಮಹಿಳಾ ಟ್ರಸ್ಟಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಠಾಣೆಯಿಂದ ನೇರವಾಗಿ ಹುಂಡಿ ಎಣಿಕೆ ನಡೆಯುವ ಕೊಠಡಿಗೆ ಮಹಿಳಾ ಟ್ರಸ್ಟಿ ಆಗಮಿಸಿದ್ದರು ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು