9:26 AM Friday4 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಕದ್ರಿ ದೇಗುಲ: ಊಟಕ್ಕೆ ಬಂದ ವಿದ್ಯಾರ್ಥಿಗಳಿಂದ ಹುಂಡಿ ಹಣ ಎಣಿಕೆ; ಕಳಂಕಿತ ಮಹಿಳಾ ಟ್ರಸ್ಟಿ ಆಗಮನಕ್ಕೆ ಆಕ್ಷೇಪ

24/03/2022, 14:27

ಮಂಗಳೂರು(reporterkarnataka.com): ಇತಿಹಾಸ ಪ್ರಸಿದ್ಧ ಕಾರಣಿಕ ಕ್ಷೇತ್ರವಾದ ಕದ್ರಿ ಮಂಜುನಾಥ ಕ್ಷೇತ್ರದಲ್ಲಿ ಈ ಬಾರಿ ಹುಂಡಿ ಎಣಿಕೆಗೆ ಜನ ಬಾರದ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಊಟಕ್ಕೆ ಬಂದ ವಿದ್ಯಾರ್ಥಿಗಳಿಂದಲೇ ಕಾಣಿಕೆ ಹಣ ಲೆಕ್ಕ ಮಾಡಿಸಿದ ಘಟನೆ ಬೆಳಕಿಗೆ ಬಂದಿದೆ.

ಕದ್ರಿ ಶ್ರೀ ಮಂಜುನಾಥ ಕ್ಷೇತ್ರದಲ್ಲಿ ಕಾಣಿಕೆ ಹುಂಡಿ ಹಗರಣ ಬೆಳಕಿಗೆ ಬಂದ ಬಳಿಕ ಗುರುವಾರ ಕ್ಷೇತ್ರದಲ್ಲಿ ಹುಂಡಿ ಎಣಿಕೆ ನಡೆಯುತ್ತಿದ್ದು, ಹುಂಡಿ ಹಣ ಕದ್ದ ಆರೋಪದ ಕಳಂಕಿತ ಮಹಿಳಾ ಟ್ರಸ್ಟಿ ಆಗಮಿಸಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದೆ ಎಂದು ತಿಳಿದು ಬಂದಿದೆ.

ಬೆಳಗ್ಗೆ 10. 30ಕ್ಕೆ ದೇವಸ್ಥಾನದ ಮಂಜುಶ್ರೀ ಸಭಾಬವನದಲ್ಲಿ ಹುಂಡಿ ಎಣಿಕೆ ಆರಂಭವಾಗಿದ್ದು, ಆಡಳಿತಾಧಿಕಾರಿ ಮತ್ತು ಒಬ್ಬರೇ ಟ್ರಸ್ಟಿ ಮನೋಹರ್ ಸುವರ್ಣ ಇದ್ದರು. 

ಸ್ವಲ್ಪ ಹೊತ್ತಿನ ಬಳಿಕ ಕಳಂಕಿತ ಮಹಿಳಾ ಟ್ರಸ್ಟಿ ಎಣಿಕೆ ನಡೆಯುತ್ತಿದ್ದ ಹಾಲ್ ಗೆ ಆಗಮಿಸಿದರು. ಇದಕ್ಕೆ ಆಡಳಿತಾಧಿಕಾರಿ ಬಳಿ ಆಕ್ಷೇಪ ವ್ಯಕ್ತಪಡಿಸಲಾಯಿತು. ಸ್ವಲ್ಪ ಸಮಯ ಕುಳಿತ ಬಳಿಕ ಆರೋಪಕ್ಕೊಳಗಾಗಿರುವ ಟ್ರಸ್ಟಿ ವಾಪಸ್ ತೆರಳಿದ್ದಾರೆ ಎಂದು ತಿಳಿದು ಬಂದಿದೆ.

ಈ ನಡುವೆ ಇನ್ನೊಬ್ಬ ಟ್ರಸ್ಟಿಯವರು ಮಹಿಳಾ ಟ್ರಸ್ಟಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಠಾಣೆಯಿಂದ ನೇರವಾಗಿ ಹುಂಡಿ ಎಣಿಕೆ ನಡೆಯುವ ಕೊಠಡಿಗೆ ಮಹಿಳಾ ಟ್ರಸ್ಟಿ ಆಗಮಿಸಿದ್ದರು ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು