9:09 PM Saturday5 - July 2025
ಬ್ರೇಕಿಂಗ್ ನ್ಯೂಸ್
ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು

ಇತ್ತೀಚಿನ ಸುದ್ದಿ

ಮತ್ತೆರಡು ಬ್ಯಾಂಕ್ ಗಳ ಶೀಘ್ರ ಖಾಸಗೀಕರಣ?: ನೀತಿ ಆಯೋಗ ಶಿಫಾರಸು; ಕಳೆದ ಬಜೆಟ್ ನಲ್ಲೇ ಸೂಚನೆ ನೀಡಿದ್ದ ವಿತ್ತ ಸಚಿವೆ

10/06/2021, 08:14

ನವದೆಹಲಿ(reporterkarnataka news): ಕೇಂದ್ರ ಸರಕಾರದ ಬ್ಯಾಂಕ್ ಗಳ ಖಾಸಗೀಕರಣದ ಪ್ರಕ್ರಿಯೆ ಮುಂದುವರೆದಿದ್ದು, ಸೆಂಟ್ರಲ್ ಬ್ಯಾಂಕ್ ಆಫ್‌ ಇಂಡಿಯಾ ಮತ್ತು ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಶೀಘ್ರದಲ್ಲೇ ಖಾಸಗೀಕರಣಗೊಳ್ಳುವ ಸಾಧ್ಯತೆಗಳಿವೆ. ನೀತಿ ಆಯೋಗ ಈ ಕುರಿತು ಶಿಫಾರಸು ಮಾಡಿದೆ.

ಕೇಂದ್ರ ಸರಕಾರದ ‘ಆತ್ಮ ನಿರ್ಭರ್ ಭಾರತ‘ದ ಅನ್ವಯ ಖಾಸಗೀಕರಣದ ಬಗ್ಗೆ ನಿರ್ದೇಶನಗಳನ್ನು ನೀಡುವ ಹೊಣೆ ‘ನೀತಿ ಆಯೋಗ‘ದ ಮೇಲಿದೆ. ಬಂಡವಾಳ ಹೂಡಿಕೆ ಮತ್ತು ಸಾರ್ವಜನಿಕ ಸೊತ್ತು ನಿರ್ವಹಣೆ ಇಲಾಖೆ ಹಾಗೂ ಆರ್ಥಿಕ ಸೇವಾ ಇಲಾಖೆಗಳು ನೀತಿ ಆಯೋಗದ ಶಿಫಾರಸುಗಳನ್ನು ಪರಿಶೀಲಿಸಿ, ಅದನ್ನು ಜಾರಿಗೊಳಿಸುವ ಬಗ್ಗೆ ಕಾನೂನಾತ್ಮಕ ಸಲಹೆ ನೀಡಲಿದೆ.

2020-21ರ ಸಾಲಿನ ಬಜೆಟ್‌ ಮಂಡಿಸುವ ಸಂದರ್ಭದಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಆರ್ಥಿಕ ಸಂಕಷ್ಟವನ್ನು ಸರಿದೂಗಿಸುವ ನಿಟ್ಟಿನಲ್ಲಿ ದೇಶದ ಪ್ರತಿಷ್ಠಿತ ಸರಕಾರಿ ಒಡೆತನದ ಸಂಸ್ಥೆಗಳನ್ನು ಖಾಸಗೀಕರಿಸುವ ಬಗ್ಗೆ ಉಲ್ಲೇಖಿಸಿದ್ದರು. ಎರಡು ಸರಕಾರಿ ಬ್ಯಾಂಕುಗಳನ್ನು ಮತ್ತು ಒಂದು ಜನರಲ್ ಇನ್ಸೂರೆನ್ಸ್ ಕಂಪೆನಿಯನ್ನೂ ಖಾಸಗೀಕರಣ ಮಾಡುತ್ತಿರುವುದಾಗಿ ತಿಳಿಸಿದ್ದರು.

ಹಾಲಿ ಆರ್ಥಿಕ ವರ್ಷದಲ್ಲಿ ಶೇರುಗಳ ಮಾರಾಟದಿಂದ 1.75 ಲಕ್ಷ ಕೋಟಿಗಳನ್ನು ಸಂಗ್ರಹಿಸಿಕೊಳ್ಳುವ ಗುರಿಯನ್ನು ಕೇಂದ್ರ ಸರಕಾರ ಹೊಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು