3:21 AM Thursday12 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಮತ್ತೆರಡು ಬ್ಯಾಂಕ್ ಗಳ ಶೀಘ್ರ ಖಾಸಗೀಕರಣ?: ನೀತಿ ಆಯೋಗ ಶಿಫಾರಸು; ಕಳೆದ ಬಜೆಟ್ ನಲ್ಲೇ ಸೂಚನೆ ನೀಡಿದ್ದ ವಿತ್ತ ಸಚಿವೆ

10/06/2021, 08:14

ನವದೆಹಲಿ(reporterkarnataka news): ಕೇಂದ್ರ ಸರಕಾರದ ಬ್ಯಾಂಕ್ ಗಳ ಖಾಸಗೀಕರಣದ ಪ್ರಕ್ರಿಯೆ ಮುಂದುವರೆದಿದ್ದು, ಸೆಂಟ್ರಲ್ ಬ್ಯಾಂಕ್ ಆಫ್‌ ಇಂಡಿಯಾ ಮತ್ತು ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಶೀಘ್ರದಲ್ಲೇ ಖಾಸಗೀಕರಣಗೊಳ್ಳುವ ಸಾಧ್ಯತೆಗಳಿವೆ. ನೀತಿ ಆಯೋಗ ಈ ಕುರಿತು ಶಿಫಾರಸು ಮಾಡಿದೆ.

ಕೇಂದ್ರ ಸರಕಾರದ ‘ಆತ್ಮ ನಿರ್ಭರ್ ಭಾರತ‘ದ ಅನ್ವಯ ಖಾಸಗೀಕರಣದ ಬಗ್ಗೆ ನಿರ್ದೇಶನಗಳನ್ನು ನೀಡುವ ಹೊಣೆ ‘ನೀತಿ ಆಯೋಗ‘ದ ಮೇಲಿದೆ. ಬಂಡವಾಳ ಹೂಡಿಕೆ ಮತ್ತು ಸಾರ್ವಜನಿಕ ಸೊತ್ತು ನಿರ್ವಹಣೆ ಇಲಾಖೆ ಹಾಗೂ ಆರ್ಥಿಕ ಸೇವಾ ಇಲಾಖೆಗಳು ನೀತಿ ಆಯೋಗದ ಶಿಫಾರಸುಗಳನ್ನು ಪರಿಶೀಲಿಸಿ, ಅದನ್ನು ಜಾರಿಗೊಳಿಸುವ ಬಗ್ಗೆ ಕಾನೂನಾತ್ಮಕ ಸಲಹೆ ನೀಡಲಿದೆ.

2020-21ರ ಸಾಲಿನ ಬಜೆಟ್‌ ಮಂಡಿಸುವ ಸಂದರ್ಭದಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಆರ್ಥಿಕ ಸಂಕಷ್ಟವನ್ನು ಸರಿದೂಗಿಸುವ ನಿಟ್ಟಿನಲ್ಲಿ ದೇಶದ ಪ್ರತಿಷ್ಠಿತ ಸರಕಾರಿ ಒಡೆತನದ ಸಂಸ್ಥೆಗಳನ್ನು ಖಾಸಗೀಕರಿಸುವ ಬಗ್ಗೆ ಉಲ್ಲೇಖಿಸಿದ್ದರು. ಎರಡು ಸರಕಾರಿ ಬ್ಯಾಂಕುಗಳನ್ನು ಮತ್ತು ಒಂದು ಜನರಲ್ ಇನ್ಸೂರೆನ್ಸ್ ಕಂಪೆನಿಯನ್ನೂ ಖಾಸಗೀಕರಣ ಮಾಡುತ್ತಿರುವುದಾಗಿ ತಿಳಿಸಿದ್ದರು.

ಹಾಲಿ ಆರ್ಥಿಕ ವರ್ಷದಲ್ಲಿ ಶೇರುಗಳ ಮಾರಾಟದಿಂದ 1.75 ಲಕ್ಷ ಕೋಟಿಗಳನ್ನು ಸಂಗ್ರಹಿಸಿಕೊಳ್ಳುವ ಗುರಿಯನ್ನು ಕೇಂದ್ರ ಸರಕಾರ ಹೊಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು