2:26 PM Thursday15 - May 2025
ಬ್ರೇಕಿಂಗ್ ನ್ಯೂಸ್
ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.…

ಇತ್ತೀಚಿನ ಸುದ್ದಿ

ಸಂತರ ಅವಹೇಳನ; ಮಾಜಿ ಸಿಎಂ ಸಿದ್ದರಾಮಯ್ಯ ಕ್ಷಮೆ ಕೇಳಲಿ: ಶಾಸಕ ವೇದವ್ಯಾಸ ಕಾಮತ್ 

25/03/2022, 19:32

ಮಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದೂ ಸಂತರ ಬಗ್ಗೆ ಕೇವಲವಾಗಿ ಮಾತನಾಡಿ ಅವಹೇಳನ ಮಾಡಿದ್ದು, ತಕ್ಷಣ ಅವರು ಕ್ಷಮೆಯಾಚಿಸಬೇಕು ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಆಗ್ರಹಿಸಿದ್ದಾರೆ.

ಸಿದ್ದರಾಮಯ್ಯ ಮುಸಲ್ಮಾನರ ಓಲೈಕೆಗಾಗಿ ಹಿಂದೂ ಸಂತರ ವಿರುದ್ಧ ಹೇಳಿಕೆ ನೀಡುವುದು ಅವರಿಗೆ ಶೋಭೆ ತರುವುದಿಲ್ಲ. ತನ್ನ ಸರಕಾರದ ಅವಧಿಯಲ್ಲಿ ಸಿದ್ಧರಾಮಯ್ಯ ಅವರು ಹಿಂದುಗಳಿಗೆ ಮಾಡಿದ ಅನ್ಯಾಯವನ್ನು ಹಿಂದೂ ಸಮಾಜ ಮರೆತಿಲ್ಲ ಎಂದು ಅವರು ತಿಳಿಸಿದ್ದಾರೆ.

ಮುಸಲ್ಮಾನ ವಿಧ್ಯಾರ್ಥಿನಿಯರು ಬುರ್ಖಾ ಹಾಕಿಕೊಂಡರೆ ತಪ್ಪೇನು, ಹಿಂದೂ ಸ್ವಾಮೀಜಿಗಳು ತಲೆಗೆ ಬಟ್ಟೆ ಹಾಕಿಕೊಳ್ಳುವುದಿಲ್ಲವೇ ಎನ್ನುವ ಪ್ರಶ್ನೆ ಎತ್ತಿದ ಸಿದ್ಧರಾಮಯನವರಿಗೆ ಮರೆವಿನ ಕಾಯಿಲೆಯಿದೆಯೇ ? ಮುಸಲ್ಮಾನ ಮಹಿಳೆಯರಿಗೆ ಬುರ್ಖಾ ಹಾಕುವುದಕ್ಕೆ ವಿರೋಧವಲ್ಲ, ತರಗತಿಯಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸದೆ ಸಮವಸ್ತ್ರ ಪಾಲಿಸಬೇಕು ಎನ್ನುವುದು ನ್ಯಾಯಾಲಯವೂ ಹೇಳಿದೆ. ಒಬ್ಬ ಜನಪ್ರತಿನಿಧಿಯಾಗಿ ಇಂತಹ ವಿಚಾರಗಳಲ್ಲಿ ರಾಜಕೀಯ ಮಾಡುವುದು ಸಿದ್ಧರಾಮಯ್ಯನವರಿಗೆ ಶೋಭೆ ತರುವುದಿಲ್ಲ ಎಂದು ಹೇಳಿದ್ದಾರೆ.

ಈ ಹಿಂದೆ ಸಿದ್ಧರಾಮಯನವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಹಿಂದೂ ಸಮುದಾಯದ ವಿರುದ್ಧ ಕಿಡಿ ಕಾರುತ್ತಲೇ ಇದ್ದರು. ಮಠ ಮಂದಿರಗಳಿಗೆ ಸಿದ್ಧರಾಮಯ್ಯ ಹಾಗೂ ಕಾಂಗ್ರೇಸ್ ಎಸಗಿದ ಅನಾಚಾರಗಳು ತಿಳಿದಿದೆ. ಸದ್ಯ ಮತ್ತದೇ ಕಾರ್ಯಕ್ಕೆ ಕೈ ಹಾಕಿ ಸಂತರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಸಿದ್ಧರಾಮಯ್ಯ ಕ್ಷಮೆ ಕೇಳಬೇಕು ಎಂದು ಶಾಸಕ ಕಾಮತ್ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು