6:50 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಸಂತರ ಅವಹೇಳನ; ಮಾಜಿ ಸಿಎಂ ಸಿದ್ದರಾಮಯ್ಯ ಕ್ಷಮೆ ಕೇಳಲಿ: ಶಾಸಕ ವೇದವ್ಯಾಸ ಕಾಮತ್ 

25/03/2022, 19:32

ಮಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದೂ ಸಂತರ ಬಗ್ಗೆ ಕೇವಲವಾಗಿ ಮಾತನಾಡಿ ಅವಹೇಳನ ಮಾಡಿದ್ದು, ತಕ್ಷಣ ಅವರು ಕ್ಷಮೆಯಾಚಿಸಬೇಕು ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಆಗ್ರಹಿಸಿದ್ದಾರೆ.

ಸಿದ್ದರಾಮಯ್ಯ ಮುಸಲ್ಮಾನರ ಓಲೈಕೆಗಾಗಿ ಹಿಂದೂ ಸಂತರ ವಿರುದ್ಧ ಹೇಳಿಕೆ ನೀಡುವುದು ಅವರಿಗೆ ಶೋಭೆ ತರುವುದಿಲ್ಲ. ತನ್ನ ಸರಕಾರದ ಅವಧಿಯಲ್ಲಿ ಸಿದ್ಧರಾಮಯ್ಯ ಅವರು ಹಿಂದುಗಳಿಗೆ ಮಾಡಿದ ಅನ್ಯಾಯವನ್ನು ಹಿಂದೂ ಸಮಾಜ ಮರೆತಿಲ್ಲ ಎಂದು ಅವರು ತಿಳಿಸಿದ್ದಾರೆ.

ಮುಸಲ್ಮಾನ ವಿಧ್ಯಾರ್ಥಿನಿಯರು ಬುರ್ಖಾ ಹಾಕಿಕೊಂಡರೆ ತಪ್ಪೇನು, ಹಿಂದೂ ಸ್ವಾಮೀಜಿಗಳು ತಲೆಗೆ ಬಟ್ಟೆ ಹಾಕಿಕೊಳ್ಳುವುದಿಲ್ಲವೇ ಎನ್ನುವ ಪ್ರಶ್ನೆ ಎತ್ತಿದ ಸಿದ್ಧರಾಮಯನವರಿಗೆ ಮರೆವಿನ ಕಾಯಿಲೆಯಿದೆಯೇ ? ಮುಸಲ್ಮಾನ ಮಹಿಳೆಯರಿಗೆ ಬುರ್ಖಾ ಹಾಕುವುದಕ್ಕೆ ವಿರೋಧವಲ್ಲ, ತರಗತಿಯಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸದೆ ಸಮವಸ್ತ್ರ ಪಾಲಿಸಬೇಕು ಎನ್ನುವುದು ನ್ಯಾಯಾಲಯವೂ ಹೇಳಿದೆ. ಒಬ್ಬ ಜನಪ್ರತಿನಿಧಿಯಾಗಿ ಇಂತಹ ವಿಚಾರಗಳಲ್ಲಿ ರಾಜಕೀಯ ಮಾಡುವುದು ಸಿದ್ಧರಾಮಯ್ಯನವರಿಗೆ ಶೋಭೆ ತರುವುದಿಲ್ಲ ಎಂದು ಹೇಳಿದ್ದಾರೆ.

ಈ ಹಿಂದೆ ಸಿದ್ಧರಾಮಯನವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಹಿಂದೂ ಸಮುದಾಯದ ವಿರುದ್ಧ ಕಿಡಿ ಕಾರುತ್ತಲೇ ಇದ್ದರು. ಮಠ ಮಂದಿರಗಳಿಗೆ ಸಿದ್ಧರಾಮಯ್ಯ ಹಾಗೂ ಕಾಂಗ್ರೇಸ್ ಎಸಗಿದ ಅನಾಚಾರಗಳು ತಿಳಿದಿದೆ. ಸದ್ಯ ಮತ್ತದೇ ಕಾರ್ಯಕ್ಕೆ ಕೈ ಹಾಕಿ ಸಂತರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಸಿದ್ಧರಾಮಯ್ಯ ಕ್ಷಮೆ ಕೇಳಬೇಕು ಎಂದು ಶಾಸಕ ಕಾಮತ್ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು