10:36 AM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಬಡವರು ಉಣ್ಣುವ ಪಡಿತರ ಅಕ್ಕಿಗೆ ಕನ್ನ: ಮಹಾರಾಷ್ಟ್ರಕ್ಕೆ ಎಗ್ಗಿಲ್ಲದೆ ಸಾಗಾಟ; ಅಧಿಕಾರಿಗಳು ಶಾಮೀಲು?

25/03/2022, 19:38

ಬೆಳಗಾವಿ(reporterkarnataka.com): ಬೆಳಗಾವಿಯ ಹುಕ್ಕೇರಿ ತಾಲೂಕಿನಿಂದ ಪಡಿತರ ಅಕ್ಕಿಯನ್ನು ನಿಪ್ಪಾಣಿ ಮೂಲಕ ಮಹಾರಾಷ್ಟ್ರಕ್ಕೆ ಅಕ್ರಮ ಸಾಗಾಟ ಮಾಡುವುದು ಮತ್ತೆ ಬೆಳಕಿಗೆ ಬಂದಿದ್ದು, ಅಕ್ರಮವನ್ನು ವೀಡಿಯೊ ಮಾಡಲೆತ್ನಿಸಿದವರ ಮೇಲೆ ಕಾರು ಹಾಯಿಸಲು ದುಷ್ಕರ್ಮಿಗಳು ಯತ್ನಿಸಿದ್ದಾರೆ.

ಮಹಾರಾಷ್ಟ್ರ ನೋಂದಣಿ ಹೊಂದಿರುವ ಒಮಿನಿ ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು. ಹುಕ್ಕೇರಿ ತಾಲ್ಲೂಕಿನ ಕನಗಲಾ ಗ್ರಾಮದಿಂದ ಅಕ್ಕಿ ತುಂಬಿಕೊಂಡು ನಿಪ್ಪಾಣಿ ಮೂಲಕ ಮಹಾರಾಷ್ಟ್ರಕ್ಕೆ ಸಾಗಿಸಲಾಗುತ್ತಿತ್ತು. ಇದನ್ನು ವಿಡಿಯೋ ಮಾಡಲು ಹೋದ ಪತ್ರಕರ್ತರ ಮೇಲೆ ಕಾರು ಹರಿಸಲು ಯತ್ನಿಸಿದ್ದಾರೆ. ಅಷ್ಟೇ ಅಲ್ಲದೆ ಅಕ್ರಮ ಅಕ್ಕಿ ಕಳ್ಳರು ದುಡ್ಡು ಕೊಟ್ಟು ಬೆಂಬಲಿಗರನ್ನು ಇಟ್ಟುಕೊಂಡು ಸುದ್ದಿ ಮಾಡಲು ಹೋದ ಪತ್ರಕರ್ತರ ಮೇಲೆ ಹಲ್ಲೆ ಮಾಡುವುದು ಸರ್ವೇ ಸಾಮಾನ್ಯವಾಗಿದೆ. ಅಧಿಕಾರಿಗಳು ಇದರಲ್ಲಿ ಶಾಮೀಲಾಗಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.

ಬೇರೆ ಬೇರೆ ಜಿಲ್ಲೆಗಳಿಂದ ಅಕ್ರಮ ಅಕ್ಕಿ ತುಂಬಿಕೊಂಡು ಬೆಳಗಾವಿ ಮಾರ್ಗವಾಗಿ ಮಹಾರಾಷ್ಟ್ರಕ್ಕೆ ಸಾಗಿಸಲಾಗುತ್ತಿದೆ. ಅಧಿಕಾರಿಗಳು ಯಾವುದೇ ರೀತಿಯ ಕ್ರಮ ತೆಗೆದುಕೊಳ್ಳದೆ ಕಣ್ಮುಚ್ಚಿ ಕುಳಿತುಕೊಂಡಿದ್ದಾರೆ. ಹಿಂದೆ ಕೆಲವು ಜನ ಅಕ್ಕಿ ಕಳ್ಳರು ಒಬ್ಬ ಪತ್ರಕರ್ತನ ಮೇಲೆ ಹಲ್ಲೆ ಮಾಡಿ ತಮ್ಮ ಲಾರಿಯನ್ನು ತೆಗೆದುಕೊಂಡು 

ಹೋದರು. ರಾಜಾರೋಷವಾಗಿ ಅಕ್ಕಿ ತುಂಬಿಕೊಂಡು ಮಹಾರಾಷ್ಟ್ರಕ್ಕೆ ಹೋಗುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಷಯ. ಧಾರವಾಡ,
ರಾಣೆಬೆನ್ನೂರು, ಹಾವೇರಿ, ಬೆಳಗಾವಿ ಎಪಿಎಂಸಿಯಿಂದ ಅಕ್ರಮ ಅಕ್ಕಿ 
ಸಾಗಾಟವಾಗುತ್ತಿದೆ. ಇವರಿಂದ ಕೆಲವು ಪತ್ರಕರ್ತರು ತಿಂಗಳಿಗೆ ಇಂತಿಷ್ಟು ಹಣ ಪಡೆದುಕೊಂಡು ಅವರಿಗೆ ಸಹಾಯ ಮಾಡುತ್ತಿದ್ದಾರೆ ಎಂಬ ಆರೋಪವಿದೆ. ನಿಷ್ಠೆಯಿಂದ ಕೆಲಸ ಮಾಡಲು ಹೋದ ಪತ್ರಕರ್ತರ ಮೇಲೆ ಹಲ್ಲೆಗೆ ಮುಂದಾಗುತ್ತಿದ್ದಾರೆ. ಅಂತವರ ವಿರುದ್ದ ಕ್ರಮಕೈಗೊಳ್ಳಬೇಕೆಂದು ಮಾಧ್ಯಮದ ಮಂದಿ ಮನವಿ ಮಾಡಿದ್ದಾರೆ.


ಬೆಳಗಾವಿ ಎಪಿಎಂಸಿಯಿಂದ ದೊಡ್ಡ ಪ್ರಮಾಣದಲ್ಲಿ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಅಕ್ಕಿ ಸಾಗಣೆ ಮಾಡುತ್ತಿದ್ದಾರೆ. ಇದರ ವಿರುದ್ಧ ಸೂಕ್ತವಾದ ಕ್ರಮಕೈಗೊಳ್ಳದಿದ್ದರೆ ಕೆಲವೇ ದಿನಗಳಲ್ಲಿ ಸೂಕ್ತವಾದ ಹೋರಾಟ ಮಾಡಬೇಕಾಗುತ್ತದೆ ಎಂದು ಸಾರ್ವಜನಿಕರು ಎಚ್ಚರಿಸಿದ್ದಾರೆ.?

ಇತ್ತೀಚಿನ ಸುದ್ದಿ

ಜಾಹೀರಾತು